<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು, ಹಿಂಸಾಚಾರ ಪೀಡಿತ ಈಶಾನ್ಯ ದೆಹಲಿಯ ಸ್ಥಿತಿ ಕುರಿತು ಚರ್ಚಿಸಿದರು.</p>.<p>ಆಮ್ ಅದ್ಮಿ ಪಕ್ಷ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಮರಳಿದ ನಂತರ ಉಭಯ ನಾಯಕರ ನಡುವಣ ಮೊದಲ ಭೇಟಿ ಇದು. ಸಂಸತ್ತಿನ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಸುಮಾರು ಒಂದು ತಾಸು ಸಭೆ ನಡೆಯಿತು.</p>.<p>ಬಳಿಕ ಮಾತನಾಡಿದ ಕೇಜ್ರಿವಾಲ್ ಅವರು, ‘ಪೊಲೀಸರು ಕಳೆದ ಕೆಲವು ದಿನಗಳಿಂದ ಇರುವಂತೆ, ಈ ಮೊದಲೇ ಜಾಗೃತರಾಗಿದ್ದಿದ್ದರೆ ಹಿಂಸಾಚಾರವನ್ನು ತಡೆಗಟ್ಟಬಹುದಿತ್ತು’ ಎಂದು ಪ್ರತಿಕ್ರಿಯಿಸಿದರು.</p>.<p>‘ಈಗ ವದಂತಿ ಹಿಂದೆಯೇ ಪೊಲೀಸರು ಜಾಗೃತರಾಗುತ್ತಿರುವುದು ಶ್ಲಾಘನೀಯ’ ಎಂದರು.</p>.<p>‘ಇಂಥ ಘಟನೆಗಳು ಮರುಕಳಿಸಬಾರದು ಎಂದು ಪ್ರಧಾನಿ ಕೂಡಾ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ದೆಹಲಿ ಅಭಿವೃದ್ಧಿಗೆ ಅವರ ಸಹಕಾರ ಕೋರಿದ್ದೇನೆ’ ಎಂದರು.</p>.<p>ಫೆಬ್ರುವರಿ 25ರಂದು ಗೃಹ ಸಚಿವ ಅಮಿತ್ ಶಾ ಅವರು ಕೇಜ್ರಿವಾಲ್ ಮತ್ತು ವಿವಿಧ ಮುಖಂಡರ ಜೊತೆಗೆ ಚರ್ಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು, ಹಿಂಸಾಚಾರ ಪೀಡಿತ ಈಶಾನ್ಯ ದೆಹಲಿಯ ಸ್ಥಿತಿ ಕುರಿತು ಚರ್ಚಿಸಿದರು.</p>.<p>ಆಮ್ ಅದ್ಮಿ ಪಕ್ಷ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಮರಳಿದ ನಂತರ ಉಭಯ ನಾಯಕರ ನಡುವಣ ಮೊದಲ ಭೇಟಿ ಇದು. ಸಂಸತ್ತಿನ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಸುಮಾರು ಒಂದು ತಾಸು ಸಭೆ ನಡೆಯಿತು.</p>.<p>ಬಳಿಕ ಮಾತನಾಡಿದ ಕೇಜ್ರಿವಾಲ್ ಅವರು, ‘ಪೊಲೀಸರು ಕಳೆದ ಕೆಲವು ದಿನಗಳಿಂದ ಇರುವಂತೆ, ಈ ಮೊದಲೇ ಜಾಗೃತರಾಗಿದ್ದಿದ್ದರೆ ಹಿಂಸಾಚಾರವನ್ನು ತಡೆಗಟ್ಟಬಹುದಿತ್ತು’ ಎಂದು ಪ್ರತಿಕ್ರಿಯಿಸಿದರು.</p>.<p>‘ಈಗ ವದಂತಿ ಹಿಂದೆಯೇ ಪೊಲೀಸರು ಜಾಗೃತರಾಗುತ್ತಿರುವುದು ಶ್ಲಾಘನೀಯ’ ಎಂದರು.</p>.<p>‘ಇಂಥ ಘಟನೆಗಳು ಮರುಕಳಿಸಬಾರದು ಎಂದು ಪ್ರಧಾನಿ ಕೂಡಾ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ದೆಹಲಿ ಅಭಿವೃದ್ಧಿಗೆ ಅವರ ಸಹಕಾರ ಕೋರಿದ್ದೇನೆ’ ಎಂದರು.</p>.<p>ಫೆಬ್ರುವರಿ 25ರಂದು ಗೃಹ ಸಚಿವ ಅಮಿತ್ ಶಾ ಅವರು ಕೇಜ್ರಿವಾಲ್ ಮತ್ತು ವಿವಿಧ ಮುಖಂಡರ ಜೊತೆಗೆ ಚರ್ಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>