ನವದೆಹಲಿ: ಪ್ರಧಾನಿ ಮೋದಿಜಗತ್ಪ್ರಸಿದ್ಧ ಸುಳ್ಳುಗಾರ. ಅವರು ಪಾಕಿಸ್ತಾನದ ಪ್ರಧಾನಿಯಂತೆ ವರ್ತಿಸುತ್ತಿದ್ದಾರೆ ಎಂದುದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ದೆಹಲಿಯ ಆಂಧ್ರಭವನದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕೇಜ್ರಿವಾಲ್ ಬೆಂಬಲ ಸೂಚಿಸಿದ್ದಾರೆ.