ಭೇಟಿ ಬಳಿಕ ಮಾತನಾಡಿರುವ ಮಮತಾ ಬ್ಯಾನರ್ಜಿ, ‘ಪ್ರಧಾನಿ ಮೋದಿ ಅವರು ಪಶ್ಚಿಮ ಬಂಗಾಳಕ್ಕೆ ಬಂದಿದ್ದಾರೆ. ಇದು ಕೇವಲ ಸೌಜನ್ಯದ ಭೇಟಿಯಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗಳನ್ನು ರಾಜ್ಯದ ಜನರು ಒಪ್ಪಿಕೊಳ್ಳುತ್ತಿಲ್ಲ. ಆ ಕಾರಣ, ನೀವು ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಪುನರ್ವಿಮರ್ಶೆ ಮಾಡುವುದು ಒಳಿತು,’ ಎಂದು ಪ್ರಧಾನಿ ಅವರಿಗೆ ಹೇಳಿರುವುದಾಗಿ ಮಮತಾ ತಿಳಿಸಿದ್ದಾರೆ.