‘ಕೆಲವು ಸಂದರ್ಭಗಳಲ್ಲಿ ಜನರು ಮಹತ್ವದ ಸಂಗತಿಗಳ ಬಗ್ಗೆ ಅಷ್ಟಾಗಿ ಗಮನಹರಿಸುವುದಿಲ್ಲ. ಇದುವೇ ಈಗ ಭಾರತದಲ್ಲಿ ಆಗುತ್ತಿರುವುದು. ವದಂತಿಗಳಿಗೆ ಕಿವಿಕೊಡಬೇಡಿ ಎಂದು ಜನರಲ್ಲಿ ಮನವಿ ಮಾಡುತ್ತಿದ್ದೇನೆ. ಕೋವಿಡ್–19 ವೈರಸ್ ಬಡವ, ಶ್ರೀಮಂತ ಎಂದು ತಾರತಮ್ಯ ಮಾಡುವುದಿಲ್ಲ. ಯೋಗ ಮಾಡುತ್ತಾರೆ, ಪ್ರತಿದಿನ ವ್ಯಾಯಾಮ ಮಾಡುತ್ತಾರೆ ಎಂಬ ಕಾರಣಕ್ಕೆ ಅಂತಹವರನ್ನು ವೈರಸ್ ಬಿಟ್ಟುಬಿಡುವುದಿಲ್ಲ’ ಎಂದು ಮೋದಿ ಹೇಳಿದರು.