ಭಾರತಕ್ಕೆ ಬಂದಿಳಿದ ಶ್ರೀಲಂಕಾದ ನೂತನ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರೊಂದಿಗೆ ಮೋದಿ ಅವರು ಮಾತುಕತೆ ನಡೆಸಿದ್ದಾರೆ. ಶ್ರೀಲಂಕಾದಲ್ಲಿರುವ ತಮಿಳು ಸಮುದಾಯದವರ ಆಶೋತ್ತರ ಈಡೇರಿಸುವುದು, ಭದ್ರತೆ ಹೆಚ್ಚಳ, ವ್ಯಾಪಾರ ಹಾಗೂ ಮೀನುಗಾರರ ಸಮಸ್ಯೆ ನಿವಾರಣೆ ವಿಷಯಗಳ ಬಗ್ಗೆ ಮಾತುಕತೆಯಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ.