ನವದೆಹಲಿ(ಪಿಟಿಐ): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಹಾಗೂ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನುಇಲ್ಲಿನ ನ್ಯಾಯಾಲಯ ವಜಾಗೊಳಿಸಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ತಾಯಿ ಸೋನಿಯಾ ಗಾಂಧಿ ವಿರುದ್ಧದ ಪ್ರಕರಣ ಇದಾಗಿದೆ.
ಪ್ರಕರಣದ ಬಗ್ಗೆ ಟ್ವೀಟ್ ಮಾಡುವ ಮೂಲಕ ನ್ಯಾಯಾಲಯದ ವಿಚಾರಣೆ ಮೇಲೆ ಸ್ವಾಮಿ ಅವರು ಪ್ರಭಾವ ಬಿರುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮೋತಿಲಾಲ್ ವೋರಾ ಅರ್ಜಿಯಲ್ಲಿ ದೂರಿದ್ದರು.