<p><strong>ಕೊಚ್ಚಿ:</strong> ಮಾಲ್ಡೀವ್ಸ್ನಲ್ಲಿದ್ದ 698 ಭಾರತೀಯರನ್ನು ಹೊತ್ತ ನೌಕಾಪಡೆಯ ಐಎನ್ಎಸ್ ಜಲಾಶ್ವ ಭಾನುವಾರ ಬೆಳಗ್ಗೆ 9.30ಕ್ಕೆ ಕೊಚ್ಚಿಯ ಬಂದರಿಗೆ ಬಂದಿಳಿದಿದೆ. ಈ ಮೂಲಕ ಲಾಕ್ಡೌನ್ ವೇಳೆ ವಿದೇಶದಲ್ಲಿದ್ದ ಭಾರತೀಯರನ್ನು ವಾಪಸ್ ಕರೆತರುವ ನೌಕಾಪಡೆಯ ಮೊದಲ ಬೃಹತ್ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ.</p>.<p>ಮಾಲೆಯಲ್ಲಿ ಶುಕ್ರವಾರ ರಾತ್ರಿ ನೌಕೆ ಪ್ರಯಾಣ ಆರಂಭಿಸಿತ್ತು. ನೌಕೆಯಲ್ಲಿದ್ದವರಲ್ಲಿ ಕರ್ನಾಟಕದ 8 ಮಂದಿ ಸೇರಿದಂತೆ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದವರು ಇದ್ದಾರೆ. ಬಹುತೇಕರು ಕೇರಳ, ತಮಿಳುನಾಡಿನವರಾಗಿದ್ದಾರೆ.</p>.<p>‘ಪ್ರಯಾಣಿಕರಿಗೆ ತಮ್ಮ ಮೊಬೈಲ್ಗಳಲ್ಲಿ ಆರೋಗ್ಯಸೇತು ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದೆ.ಬಂದರು ಟರ್ಮಿನಲ್ನಲ್ಲಿ ಉಚಿತ ವೈ-ಫೈ ವ್ಯವಸ್ಥೆ ಮಾಡಲಾಗಿದೆ. ಲಗೇಜ್ಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ’ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಪ್ರಯಾಣಿಕರನ್ನು ಕ್ವಾರಂಟೈನ್ ಕೇಂದ್ರಗಳು ಅಥವಾ ಆಸ್ಪತ್ರೆಗಳಿಗೆ ಕಳುಹಿಸಲು ಕೇರಳ ಸರ್ಕಾರ ಆಂಬುಲೆನ್ಸ್, ಬಸ್ ಹಾಗೂ ಟ್ಯಾಕ್ಸಿ ವ್ಯವಸ್ಥೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಮಾಲ್ಡೀವ್ಸ್ನಲ್ಲಿದ್ದ 698 ಭಾರತೀಯರನ್ನು ಹೊತ್ತ ನೌಕಾಪಡೆಯ ಐಎನ್ಎಸ್ ಜಲಾಶ್ವ ಭಾನುವಾರ ಬೆಳಗ್ಗೆ 9.30ಕ್ಕೆ ಕೊಚ್ಚಿಯ ಬಂದರಿಗೆ ಬಂದಿಳಿದಿದೆ. ಈ ಮೂಲಕ ಲಾಕ್ಡೌನ್ ವೇಳೆ ವಿದೇಶದಲ್ಲಿದ್ದ ಭಾರತೀಯರನ್ನು ವಾಪಸ್ ಕರೆತರುವ ನೌಕಾಪಡೆಯ ಮೊದಲ ಬೃಹತ್ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ.</p>.<p>ಮಾಲೆಯಲ್ಲಿ ಶುಕ್ರವಾರ ರಾತ್ರಿ ನೌಕೆ ಪ್ರಯಾಣ ಆರಂಭಿಸಿತ್ತು. ನೌಕೆಯಲ್ಲಿದ್ದವರಲ್ಲಿ ಕರ್ನಾಟಕದ 8 ಮಂದಿ ಸೇರಿದಂತೆ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದವರು ಇದ್ದಾರೆ. ಬಹುತೇಕರು ಕೇರಳ, ತಮಿಳುನಾಡಿನವರಾಗಿದ್ದಾರೆ.</p>.<p>‘ಪ್ರಯಾಣಿಕರಿಗೆ ತಮ್ಮ ಮೊಬೈಲ್ಗಳಲ್ಲಿ ಆರೋಗ್ಯಸೇತು ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದೆ.ಬಂದರು ಟರ್ಮಿನಲ್ನಲ್ಲಿ ಉಚಿತ ವೈ-ಫೈ ವ್ಯವಸ್ಥೆ ಮಾಡಲಾಗಿದೆ. ಲಗೇಜ್ಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ’ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಪ್ರಯಾಣಿಕರನ್ನು ಕ್ವಾರಂಟೈನ್ ಕೇಂದ್ರಗಳು ಅಥವಾ ಆಸ್ಪತ್ರೆಗಳಿಗೆ ಕಳುಹಿಸಲು ಕೇರಳ ಸರ್ಕಾರ ಆಂಬುಲೆನ್ಸ್, ಬಸ್ ಹಾಗೂ ಟ್ಯಾಕ್ಸಿ ವ್ಯವಸ್ಥೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>