<p><strong>ಭುವನೇಶ್ವರ:</strong> ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾದಳ ಪಕ್ಷವು (ಬಿಜೆಡಿ)ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದೆ. ಇದು ದೇಶದಲ್ಲೇ ಮೊದಲು.</p>.<p>ಮಿಷನ್ ಶಕ್ತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸ್ವಯಂ ಸೇವಾ ಸಂಘ ಉದ್ದೇಶಿಸಿ ಮಾತನಾಡಿದ ಪಟ್ನಾಯಕ್, ಪ್ರಸಿದ್ಧ ಬಿಜು ಬಾಬು ಅವರ ಕರ್ಮಭೂಮಿಯಾದ ಕೇಂದ್ರಪರಾದಲ್ಲಿ ಮಹಿಳಾ ಮೀಸಲಾತಿ ವಿಚಾರ ಘೋಷಿಸಲು ಸಂತಸವಾಗುತ್ತಿದೆ ಎಂದಿದ್ದಾರೆ.</p>.<p>ದೇಶದ ಮಹಿಳಾ ಸಬಲೀಕರಣದ ಹಾದಿಯಲ್ಲಿ ಒಡಿಶಾದ ಮಹಿಳೆಯರು ಮುಂದಿದ್ದಾರೆ. ಭಾರತ ಪ್ರಪಂಚದಲ್ಲಿ ಮುನ್ನಡೆ ಸಾಧಿಸಬೇಕೆಂದಿದ್ದರೆ, ಅಮೆರಿಕ ಹಾಗೂ ಚೀನಾಗಳಿಗೆಸಮನಾಗಿಮುಂದುವರಿಯಬೇಕೆಂದಿದ್ದರೆ ಮಹಿಳಾ ಸಬಲೀಕರಣ ಅಗತ್ಯ ಎಂದು ನವೀನ್ ಪಟ್ನಾಯಕ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಕೊಟ್ಟ ಭರವಸೆ ಉಳಿಸಿಕೊಳ್ಳುವುದಾದಲ್ಲಿ, ಚುನಾವಣೆ ಸಂದರ್ಭಗಳಲ್ಲಿ ಪ್ರಚಾರ ಮಾಡುವ ಮಹಿಳಾ ಸಬಲೀಕರಣ ಅಂಶವನ್ನು ಜಾರಿಗೆ ತರಲು ಶ್ರಮಿಸಿ ಎಂದೂ ಅವರು ರಾಷ್ಟ್ರೀಯ ಪಕ್ಷಗಳಿಗೆ ಕರೆ ಕೊಟ್ಟಿದ್ದಾರೆ.</p>.<p>ಜೊತೆಗೆ ಕೇಂದ್ರಪರಾದಲ್ಲಿರುವ ಮಿಷನ್ ಶಕ್ತಿ ಭವನಕ್ಕೆ ₹1ಕೋಟಿ ಅನುದಾನ ಘೋಷಿಸಿದ್ದಾರೆ.</p>.<p>ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರ ಮೀಸಲಾತಿ ನೀಡುವ ಪ್ರಸ್ತಾವಕ್ಕೆ 2018ರ ನವೆಂಬರ್ನಲ್ಲಿಯೇ ಪಟ್ನಾಯಕ್ ಸರ್ಕಾರಅನುಮೋದನೆ ಪಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾದಳ ಪಕ್ಷವು (ಬಿಜೆಡಿ)ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದೆ. ಇದು ದೇಶದಲ್ಲೇ ಮೊದಲು.</p>.<p>ಮಿಷನ್ ಶಕ್ತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸ್ವಯಂ ಸೇವಾ ಸಂಘ ಉದ್ದೇಶಿಸಿ ಮಾತನಾಡಿದ ಪಟ್ನಾಯಕ್, ಪ್ರಸಿದ್ಧ ಬಿಜು ಬಾಬು ಅವರ ಕರ್ಮಭೂಮಿಯಾದ ಕೇಂದ್ರಪರಾದಲ್ಲಿ ಮಹಿಳಾ ಮೀಸಲಾತಿ ವಿಚಾರ ಘೋಷಿಸಲು ಸಂತಸವಾಗುತ್ತಿದೆ ಎಂದಿದ್ದಾರೆ.</p>.<p>ದೇಶದ ಮಹಿಳಾ ಸಬಲೀಕರಣದ ಹಾದಿಯಲ್ಲಿ ಒಡಿಶಾದ ಮಹಿಳೆಯರು ಮುಂದಿದ್ದಾರೆ. ಭಾರತ ಪ್ರಪಂಚದಲ್ಲಿ ಮುನ್ನಡೆ ಸಾಧಿಸಬೇಕೆಂದಿದ್ದರೆ, ಅಮೆರಿಕ ಹಾಗೂ ಚೀನಾಗಳಿಗೆಸಮನಾಗಿಮುಂದುವರಿಯಬೇಕೆಂದಿದ್ದರೆ ಮಹಿಳಾ ಸಬಲೀಕರಣ ಅಗತ್ಯ ಎಂದು ನವೀನ್ ಪಟ್ನಾಯಕ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಕೊಟ್ಟ ಭರವಸೆ ಉಳಿಸಿಕೊಳ್ಳುವುದಾದಲ್ಲಿ, ಚುನಾವಣೆ ಸಂದರ್ಭಗಳಲ್ಲಿ ಪ್ರಚಾರ ಮಾಡುವ ಮಹಿಳಾ ಸಬಲೀಕರಣ ಅಂಶವನ್ನು ಜಾರಿಗೆ ತರಲು ಶ್ರಮಿಸಿ ಎಂದೂ ಅವರು ರಾಷ್ಟ್ರೀಯ ಪಕ್ಷಗಳಿಗೆ ಕರೆ ಕೊಟ್ಟಿದ್ದಾರೆ.</p>.<p>ಜೊತೆಗೆ ಕೇಂದ್ರಪರಾದಲ್ಲಿರುವ ಮಿಷನ್ ಶಕ್ತಿ ಭವನಕ್ಕೆ ₹1ಕೋಟಿ ಅನುದಾನ ಘೋಷಿಸಿದ್ದಾರೆ.</p>.<p>ಸಂಸತ್ತು ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರ ಮೀಸಲಾತಿ ನೀಡುವ ಪ್ರಸ್ತಾವಕ್ಕೆ 2018ರ ನವೆಂಬರ್ನಲ್ಲಿಯೇ ಪಟ್ನಾಯಕ್ ಸರ್ಕಾರಅನುಮೋದನೆ ಪಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>