ಬಿಎಸ್ ಎಫ್ ನ 11ನೇ ಬೆಟಾಲಿಯನ್ ನ ಸಿಬ್ಬಂದಿ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿತೊಡಗಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೂ ನಕ್ಸಲರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಛತ್ತೀಸಗಡದ ಎರಡು ಲೋಕಸಭಾ ಕ್ಷೇತ್ರಗಳಿಗೆಇದೇ 18ಕ್ಕೆ ಚುನಾವಣೆ ನಡೆಯಲಿದ್ದು ಮತದಾರರಲ್ಲಿ ಆತಂಕ ಉಂಟು ಮಾಡಲಿಕ್ಕಾಗಿಯೇ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.