₹72 ಸಾವಿರ ಕೋಟಿ ಮೊತ್ತದಯೋಜನೆಗಳಿಗೆ ಅನುಮೋದನೆ ನೀಡಿಕೆ ಹಾಗೂ ಅನುಷ್ಠಾನದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ನಿಗಮದ ಅಧ್ಯಕ್ಷರೂ ಆಗಿದ್ದ ಅಜಿತ್ ವಿರುದ್ಧ ಅಂದು ಪ್ರತಿಪಕ್ಷಗಳ ಸಾಲಿನಲ್ಲಿದ್ದ ದೇವೇಂದ್ರ ಫಡಣವೀಸ್ ಅವರು ದನಿ ಎತ್ತಿದ್ದರು. ಹೀಗಾಗಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ತನಿಖೆಗೆ ಆದೇಶಿಸಿದ್ದರು. 2014ರಲ್ಲಿ ಫಡಣವೀಸ್ ಅವರು ಈ ಪ್ರಕರಣವನ್ನು ಎಸಿಬಿಗೆ ವಹಿಸಿದ್ದರು.