ಹೂವಿನಹಡಗಲಿ: ‘ಅಳಿವಿನ ಅಂಚಿನಲ್ಲಿರುವ ಜಾನಪದ ಕಲಾ ಪ್ರಕಾರಗಳನ್ನು ಉಳಿಸಿ, ಬೆಳೆಸುವ ಮೂಲಕ ಅವುಗಳಿಗೆ ಮರುಜೀವ ನೀಡಬೇಕಿದೆ’ ಎಂದು ಯುವ ಮುಖಂಡ ಪತ್ರೇಶ್ ಹಿರೇಮಠ ನುಡಿದರು.ತಾಲ್ಲೂಕಿನ ಅಂಗೂರು ಗ್ರಾಮದ ಆಂಜನೇಯ ಬಯಲು ವೇದಿಕೆಯಲ್ಲಿ ಚಂದ್ರಶೇಖರ ಕಲಾ ಬಳಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಜಾನಪದ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.