<p><strong>ಚೆನ್ನೈ: </strong>ನಗರದಲ್ಲಿರುವ ಸಲೂನ್ಗಳಲ್ಲಿ ಗ್ರಾಹಕರ ಆಧಾರ್ ಕಾರ್ಡ್ಗಳನ್ನು ಪರಿಶೀಲಿಸಿದ ಬಳಿಕವಷ್ಟೇ ಕ್ಷೌರ ಮಾಡಲಾಗುತ್ತದೆ. ಯಾವುದೇ ಗ್ರಾಹಕರಿಗೆ ಸೇವೆ ಒದಗಿಸುವ ಮುನ್ನ ಅವರ ಹೆಸರು ವಿಳಾಸ, ದೂರವಾಣಿ ಸಂಖ್ಯೆ ಮತ್ತು ಆಧಾರ್ಕಾರ್ಡ್ ಸಂಖ್ಯೆಯನ್ನು ಕಡ್ಡಾಯಬಾಗಿ ದಾಖಲಿಸುವಂತೆ ಸರ್ಕಾರ ಹೊಸ ನಿಯಮ ರೂಪಿಸಿದೆ.</p>.<p>ತಮಿಳುನಾಡಿನಲ್ಲಿ ಸಲೂನ್ಗಳನ್ನು ಪುನಃ ತೆರೆಯಲು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಅದರಂತೆ ಸಲೂನ್ಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಲಿ ಪಾಲಿಸಬೇಕಾಗಿದೆ.</p>.<p>ತಮಿಳುನಾಡಿನಲ್ಲಿ ಜೂನ್ 30ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ. ಕೆಲವು ನಿರ್ಬಂಧಗಳನ್ನು ಸಡಿಲಿಸಿ ಸಾರಿಗೆ, ಹೋಟೆಲ್, ರೆಸ್ಟೋರೆಂಟ್ಗಳಿಗೆ ಷರುತ್ತುಬದ್ಧ ಅನುಮತಿ ನೀಡಲಾಗಿದೆ.</p>.<p>ಕೋವಿಡ್–19 ಸೋಂಕು ಭೀತಿಯಿಂದಾಗಿ ದೇಶದಾದ್ಯಂತ ಲಾಕ್ಡೌನ್ ಘೋಷಿಸಲಾಗಿತ್ತು. ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಈಗಲೂ ಕಟ್ಟುನಿಟ್ಟಾಗಿ ಜಾರಿಯಲ್ಲಿದೆ. ತಮಿಳುನಾಡು ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಸಲೂನ್ಗಳನ್ನು ತೆರೆಯಲು ಮೇ ತಿಂಗಳಲ್ಲಿ ಅವಕಾಶ ನೀಡಿತ್ತು.</p>.<p>ದೇಶದಲ್ಲಿ ಅತಿಹೆಚ್ಚು ಸೋಂಕು ಕಾಣಿಸಿಕೊಂಡ ರಾಜ್ಯಗಳ ಸಾಲಿನಲ್ಲಿ ತಮಿಳುನಾಡು 2ನೇ ಸ್ಥಾನದಲ್ಲಿದೆ. ಇಲ್ಲಿ 23,495 ಜನರಿಗೆ ಸೋಂಕು ತಗುಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ನಗರದಲ್ಲಿರುವ ಸಲೂನ್ಗಳಲ್ಲಿ ಗ್ರಾಹಕರ ಆಧಾರ್ ಕಾರ್ಡ್ಗಳನ್ನು ಪರಿಶೀಲಿಸಿದ ಬಳಿಕವಷ್ಟೇ ಕ್ಷೌರ ಮಾಡಲಾಗುತ್ತದೆ. ಯಾವುದೇ ಗ್ರಾಹಕರಿಗೆ ಸೇವೆ ಒದಗಿಸುವ ಮುನ್ನ ಅವರ ಹೆಸರು ವಿಳಾಸ, ದೂರವಾಣಿ ಸಂಖ್ಯೆ ಮತ್ತು ಆಧಾರ್ಕಾರ್ಡ್ ಸಂಖ್ಯೆಯನ್ನು ಕಡ್ಡಾಯಬಾಗಿ ದಾಖಲಿಸುವಂತೆ ಸರ್ಕಾರ ಹೊಸ ನಿಯಮ ರೂಪಿಸಿದೆ.</p>.<p>ತಮಿಳುನಾಡಿನಲ್ಲಿ ಸಲೂನ್ಗಳನ್ನು ಪುನಃ ತೆರೆಯಲು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಅದರಂತೆ ಸಲೂನ್ಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಲಿ ಪಾಲಿಸಬೇಕಾಗಿದೆ.</p>.<p>ತಮಿಳುನಾಡಿನಲ್ಲಿ ಜೂನ್ 30ರವರೆಗೆ ಲಾಕ್ಡೌನ್ ವಿಸ್ತರಿಸಲಾಗಿದೆ. ಕೆಲವು ನಿರ್ಬಂಧಗಳನ್ನು ಸಡಿಲಿಸಿ ಸಾರಿಗೆ, ಹೋಟೆಲ್, ರೆಸ್ಟೋರೆಂಟ್ಗಳಿಗೆ ಷರುತ್ತುಬದ್ಧ ಅನುಮತಿ ನೀಡಲಾಗಿದೆ.</p>.<p>ಕೋವಿಡ್–19 ಸೋಂಕು ಭೀತಿಯಿಂದಾಗಿ ದೇಶದಾದ್ಯಂತ ಲಾಕ್ಡೌನ್ ಘೋಷಿಸಲಾಗಿತ್ತು. ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಈಗಲೂ ಕಟ್ಟುನಿಟ್ಟಾಗಿ ಜಾರಿಯಲ್ಲಿದೆ. ತಮಿಳುನಾಡು ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಸಲೂನ್ಗಳನ್ನು ತೆರೆಯಲು ಮೇ ತಿಂಗಳಲ್ಲಿ ಅವಕಾಶ ನೀಡಿತ್ತು.</p>.<p>ದೇಶದಲ್ಲಿ ಅತಿಹೆಚ್ಚು ಸೋಂಕು ಕಾಣಿಸಿಕೊಂಡ ರಾಜ್ಯಗಳ ಸಾಲಿನಲ್ಲಿ ತಮಿಳುನಾಡು 2ನೇ ಸ್ಥಾನದಲ್ಲಿದೆ. ಇಲ್ಲಿ 23,495 ಜನರಿಗೆ ಸೋಂಕು ತಗುಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>