ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ 1947ರಲ್ಲಿ ಅಧಿಕಾರ ವಹಿಸಿಕೊಂಡ ಜವಾಹರ್ ಲಾಲ್ ನೆಹರು ಕಾಂಗ್ರೆಸ್ ಪಕ್ಷದಿಂದ ಸತತವಾಗಿ 17 ವರ್ಷಗಳ ಕಾಲ ಆಡಳಿತ ನಡೆಸಿದರು. ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ 1889ರ ನವೆಂಬರ್ 14ರಂದು ಜನಿಸಿದ ನೆಹರು, ರಾಷ್ಟ್ರ ಮುಂದುವರಿಯಬೇಕಾದರೆ ಕೈಗಾರಿಕೆಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಪ್ರತಿಪಾದಿಸಿದ್ದರು. ಅದೇ ರೀತಿ ಹಲವು ಕೈಗಾರಿಕೆಗಳನ್ನು ಭಾರತದಲ್ಲಿ ಸ್ಥಾಪಿಸಿದರು. ಹಲವು ನೀರಾವರಿ ಯೋಜನೆಗಳನ್ನು ಜಾರಿಗೆ ತಂದ ಅವರು ಬಡತನ, ನಿರ್ಮೂಲನೆ ಹಾಗೂ ನಿರುದ್ಯೋಗ ಸಮಸ್ಯೆಗೆ ಹೆಚ್ಚು ಹೆಚ್ಚು ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದಿದ್ದರು. 1964ರ ಮೇ 27ರಂದು ದೆಹಲಿಯ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಅವರು ನಿಧನರಾದರು.