<p><strong>ಮುಂಬೈ</strong>: ಹಿರಿಯ ಐಪಿಎಸ್ ಅಧಿಕಾರಿ ಪರಮವೀರ್ ಸಿಂಗ್ ಅವರನ್ನು ಮುಂಬೈನ ನೂತನ ಪೊಲೀಸ್ ಕಮಿಷನರ್ ಆಗಿ ಶನಿವಾರ ನೇಮಕ ಮಾಡಲಾಗಿದೆ.</p>.<p>1988ರ ಬ್ಯಾಚ್ನ ಅಧಿಕಾರಿಯಾಗಿರುವ ಸಿಂಗ್, ಶನಿವಾರವಷ್ಟೇ ನಿವೃತ್ತಿಹೊಂದಿದ ಸಂಜಯ್ ಬರ್ವೆ ಅವರಿಂದ ಅಧಿಕಾರ ಸ್ವೀಕರಿಸಿದರು. ನೂತನ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮುನ್ನ ಅವರು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿಜಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.</p>.<p>ಸಿಂಗ್ ಅವರು ಎಸಿಬಿ ಡಿಜಿಯಾಗಿದ್ದ ಸಂದರ್ಭದಲ್ಲಿಯೇ, ಎನ್ಸಿಪಿ ನಾಯಕ, ಈಗ ಉಪಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರಿಗೆ ಬಹುಕೋಟಿ ನೀರಾವರಿ ಹಗರಣದಲ್ಲಿ ಕ್ಲೀನ್ ಚಿಟ್ ನೀಡಿದ್ದರು.</p>.<p>ಈ ಹಿಂದೆ ಪೊಲೀಸ್ ಕಮಿಷನರ್ ಆಗಿದ್ದ ಬರ್ವೆ, ಮುಂಬೈ ಪೊಲೀಸ್ ಇಲಾಖೆಯ ದಾಖಲಾತಿ, ಕಾಗದಪತ್ರಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸುವ ಕಾರ್ಯದ ಗುತ್ತಿಗೆಯನ್ನು, ಪತ್ನಿ ಹಾಗೂ ಪುತ್ರನ ಒಡೆತನ ಕಂಪನಿಗೆ ನೀಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.</p>.<p><strong>ಮಹಿಳೆಯರ ಸುರಕ್ಷತೆಗೆ ಒತ್ತು:</strong> ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಂಗ್, ‘ಮಹಾನಗರದಲ್ಲಿ ಮಹಿಳೆಯರಿಗೆ ಸುರಕ್ಷತೆ ಖಾತರಿಪಡಿಸುವುದಕ್ಕೆ ಆದ್ಯತೆ ನೀಡುವುದಾಗಿ’ ಹೇಳಿದರು.</p>.<p>ಭೂಗತ ಚಟುವಟಿಕೆಗಳ ಮೇಲೆ, ಒತ್ತೆ ಇರಿಸುವುದು ಹಾಗೂ ಅಪರಾಧ ಕೃತ್ಯಗಳ ನಿಗ್ರಹಕ್ಕೆ ಒತ್ತು ನೀಡಲಾಗುವುದು ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಹಿರಿಯ ಐಪಿಎಸ್ ಅಧಿಕಾರಿ ಪರಮವೀರ್ ಸಿಂಗ್ ಅವರನ್ನು ಮುಂಬೈನ ನೂತನ ಪೊಲೀಸ್ ಕಮಿಷನರ್ ಆಗಿ ಶನಿವಾರ ನೇಮಕ ಮಾಡಲಾಗಿದೆ.</p>.<p>1988ರ ಬ್ಯಾಚ್ನ ಅಧಿಕಾರಿಯಾಗಿರುವ ಸಿಂಗ್, ಶನಿವಾರವಷ್ಟೇ ನಿವೃತ್ತಿಹೊಂದಿದ ಸಂಜಯ್ ಬರ್ವೆ ಅವರಿಂದ ಅಧಿಕಾರ ಸ್ವೀಕರಿಸಿದರು. ನೂತನ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮುನ್ನ ಅವರು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಡಿಜಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.</p>.<p>ಸಿಂಗ್ ಅವರು ಎಸಿಬಿ ಡಿಜಿಯಾಗಿದ್ದ ಸಂದರ್ಭದಲ್ಲಿಯೇ, ಎನ್ಸಿಪಿ ನಾಯಕ, ಈಗ ಉಪಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರಿಗೆ ಬಹುಕೋಟಿ ನೀರಾವರಿ ಹಗರಣದಲ್ಲಿ ಕ್ಲೀನ್ ಚಿಟ್ ನೀಡಿದ್ದರು.</p>.<p>ಈ ಹಿಂದೆ ಪೊಲೀಸ್ ಕಮಿಷನರ್ ಆಗಿದ್ದ ಬರ್ವೆ, ಮುಂಬೈ ಪೊಲೀಸ್ ಇಲಾಖೆಯ ದಾಖಲಾತಿ, ಕಾಗದಪತ್ರಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸುವ ಕಾರ್ಯದ ಗುತ್ತಿಗೆಯನ್ನು, ಪತ್ನಿ ಹಾಗೂ ಪುತ್ರನ ಒಡೆತನ ಕಂಪನಿಗೆ ನೀಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.</p>.<p><strong>ಮಹಿಳೆಯರ ಸುರಕ್ಷತೆಗೆ ಒತ್ತು:</strong> ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಂಗ್, ‘ಮಹಾನಗರದಲ್ಲಿ ಮಹಿಳೆಯರಿಗೆ ಸುರಕ್ಷತೆ ಖಾತರಿಪಡಿಸುವುದಕ್ಕೆ ಆದ್ಯತೆ ನೀಡುವುದಾಗಿ’ ಹೇಳಿದರು.</p>.<p>ಭೂಗತ ಚಟುವಟಿಕೆಗಳ ಮೇಲೆ, ಒತ್ತೆ ಇರಿಸುವುದು ಹಾಗೂ ಅಪರಾಧ ಕೃತ್ಯಗಳ ನಿಗ್ರಹಕ್ಕೆ ಒತ್ತು ನೀಡಲಾಗುವುದು ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>