ನವದೆಹಲಿ:‘ಹೆದ್ದಾರಿಗಳ ಇಕ್ಕೆಲದಲ್ಲಿ ಮರಗಳನ್ನು ಬೆಳೆಸುವ ಮತ್ತು ವಿಭಜಕದಲ್ಲಿ ಗಿಡಗಳನ್ನು ಬೆಳೆಸುವ ಬಗ್ಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ’ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಹಾಗೂ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ರಾಷ್ಟ್ರೀಯ ಹಸಿರು ಪೀಠ (ಎನ್ಜಿಟಿ) ನಿರ್ದೇಶನ ನೀಡಿದೆ.