ನವದೆಹಲಿ: ಒಳಚರಂಡಿ ಹಾಗೂ ಕೈಗಾರಿಕೆಗಳ ತ್ಯಾಜ್ಯ ಸಮುದ್ರ ಸೇರುವುದನ್ನು ತಡೆಯಲು ಕೈಗೊಂಡ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಹಸಿರು ಮಂಡಳಿ (ಎನ್ಜಿಟಿ) ನಿರ್ದೇಶನ ನೀಡಿದೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಒಂದು ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಕರ್ನಾಟಕ ಸೇರಿದಂತೆ ಕರಾವಳಿ ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಂಡಳಿಯ ನ್ಯಾಯಮೂರ್ತಿ ಆದರ್ಶಕುಮಾರ್ ಗೋಯಲ್ ನೇತೃತ್ವದ ಪ್ರಧಾನ ಪೀಠ ನಿರ್ದೇಶಿಸಿದೆ.
‘ನಿಗದಿತ ಗಡುವಿನೊಳಗೆ ವರದಿ ಸಲ್ಲಿಸಲು ವಿಫಲವಾಗುವ ರಾಜ್ಯಗಳು, ಈ ನಿರ್ದೇಶನವನ್ನು ಪಾಲಿಸುವವರೆಗೆ ಪ್ರತಿ ತಿಂಗಳು ₹ 10 ಲಕ್ಷ ದಂಡ ಭರಿಸಬೇಕು’ ಎಂದೂ ಪೀಠ ಸೂಚಿಸಿದೆ.