ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ನೋಟಿಸ್‌

ನವೋದಯ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತು ವರದಿ ಕೇಳಿದ ಎನ್‌ಎಚ್ಆರ್‌ಸಿ
Last Updated 1 ಜನವರಿ 2019, 20:00 IST
ಅಕ್ಷರ ಗಾತ್ರ

ನವದೆಹಲಿ: 2013 ರಿಂದ 2017ರ ಅವಧಿಯಲ್ಲಿ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ 49 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್ಆರ್‌ಸಿ) ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ (ಎಚ್‌ಆರ್‌ಡಿ)ಮಂಗಳವಾರ ನೋಟಿಸ್‌ ನೀಡಿದೆ.

ಮೃತಪಟ್ಟವರಲ್ಲಿ ಏಳು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಲ್ಲ ಪ್ರಕರಣಗಳಲ್ಲೂ ಸಹಪಾಠಿಗಳು ಅಥವಾ ಶಾಲಾ ಸಿಬ್ಬಂದಿ ಇವರ ಮೃತದೇಹಗಳನ್ನು ಪತ್ತೆಮಾಡಿದ್ದಾರೆ ಎಂದು ಆಯೋಗ ಹೇಳಿದೆ.

ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತು ಮಾಧ್ಯಮಗಳ ವರದಿ ಆಧರಿಸಿ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಮೃತರಲ್ಲಿ ಅರ್ಧದಷ್ಟು ವಿದ್ಯಾರ್ಥಿಗಳು ದಲಿತ ಹಾಗೂ ಬುಡಕಟ್ಟು ವರ್ಗಗಳಿಗೆ ಸೇರಿದವರು. ಅವರಲ್ಲಿ ಹೆಚ್ಚಿನವರು ಗಂಡು ಮಕ್ಕಳು ಎಂದು ಆಯೋಗ ಹೇಳಿದೆ.

ನವೋದಯ ವಸತಿ ವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ನೆರವಾಗುವಂತೆ ನುರಿತ ಆಪ್ತಸಮಾಲೋಚಕರನ್ನು ನೇಮಿಸಲಾಗಿದೆಯೇ?, ವಿದ್ಯಾರ್ಥಿಗಳನ್ನು ಒಂಟಿಯಾಗಿ ಕೊಠಡಿಯಲ್ಲಿ ಬಿಡದಂತೆ ನಿಗಾ ವಹಿಸುವ ಸಿಬ್ಬಂದಿ ವರ್ಗವಿದೆಯೇ?, ದೂರವಾಣಿ ಮೂಲಕ ಆಪ್ತಸಮಾಲೋಚನೆಗೆ ಅವಕಾಶವಿದೆಯೇ? ಎನ್ನುವ ಕುರಿತು ಆರು ವಾರದೊಳಗಾಗಿ ಮಾಹಿತಿ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT