ಸೆಂಟ್ರಲ್ ಜೈಲಿನಲ್ಲಿದ್ದ ಆರು ಕೈದಿಗಳನ್ನು ಚಿಕಿತ್ಸೆಯ ಸಲುವಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಗ ಉಗ್ರರು ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ವೇಳೆ ಉಗ್ರ ನವೀದ್ ಪೊಲೀಸರಿಂದ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ರಕ್ಷಣಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಇಮ್ತಿಯಾಜ್ ಸ್ಮಾಯಿಲ್ ಪರ್ರೆ ಅವರು ಘಟನೆಯನ್ನು ವಿವರಿಸಿದ್ದಾರೆ.