ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಆಸ್ಪತ್ರೆ ಮೇಲೆ ಉಗ್ರರ ದಾಳಿ, ಚಿಕಿತ್ಸೆ ಪಡೆಯುತ್ತಿದ್ದ ಪಾಕಿಸ್ತಾನಿ ಉಗ್ರ ಪರಾರಿ

ಪೊಲೀಸ್‌ ಕಾನ್‌ಸ್ಟೇಬಲ್
Last Updated 6 ಫೆಬ್ರುವರಿ 2018, 10:32 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ಶ್ರೀ ಮಹಾರಾಜ ಹರಿಸಿಂಗ್ ಆಸ್ಪತ್ರೆಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸ್‌ ಕಾನ್‌ಸ್ಟೇಬಲ್ ಒಬ್ಬರು ಮೃತಪಟ್ಟಿದ್ದು,  ಚಿಕಿತ್ಸೆಗಾಗಿ ಬಂದಿದ್ದ  ಪಾಕಿಸ್ತಾನದ ಬಂಧಿತ ಉಗ್ರನೊಬ್ಬ ಪರಾರಿಯಾಗಿದ್ದಾನೆ.

ಚಿಕಿತ್ಸೆಗಾಗಿ ಬಂದಿದ್ದ  ಪಾಕಿಸ್ತಾನ ಉಗ್ರ ಅಬು ಹಂಜುಲ್ಲಾ ಅಲಿಯಾಸ್ ನವೀದ್ ಜಾಟ್ ಪರಾರಿಯಾದ ಉಗ್ರ . ಈ ಉಗ್ರನನ್ನು ಕೆಲವು ತಿಂಗಳ ಹಿಂದೆ ಶೋಪಿಯಾನ್‌ನಲ್ಲಿ ಬಂದಿಸಲಾಗಿತ್ತು.

ಸೆಂಟ್ರಲ್ ಜೈಲಿನಲ್ಲಿದ್ದ ಆರು ಕೈದಿಗಳನ್ನು ಚಿಕಿತ್ಸೆಯ ಸಲುವಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಗ ಉಗ್ರರು ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ವೇಳೆ ಉಗ್ರ ನವೀದ್ ಪೊಲೀಸರಿಂದ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ರಕ್ಷಣಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಇಮ್ತಿಯಾಜ್ ಸ್ಮಾಯಿಲ್ ಪರ್ರೆ ಅವರು ಘಟನೆಯನ್ನು ವಿವರಿಸಿದ್ದಾರೆ.

ಈಗಾಗಲೇ ಈ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT