ನವದೆಹಲಿ: ವಜ್ರದ ವ್ಯಾಪಾರಿ ನೀರವ್ ಮೋದಿ ಹಸ್ತಾಂತರಕ್ಕೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಸಿಬಿಐ ಮೂಲಗಳು ಮಂಗಳವಾರ ತಿಳಿಸಿದೆ.
ಲಂಡನ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಸಿಬಿಐ ಮತ್ತು ಇ.ಡಿ ಮೇಲ್ವಿಚಾರಣೆ ನಡೆಸುತ್ತಿದೆ. ಆರೋಪಿ ಹಸ್ತಾಂತರದ ಕಾನೂನು ಪ್ರಕ್ರಿಯೆಗೆ ಅದರದೇ ಆದ ಸಮಯ ಬೇಕಾಗುತ್ತದೆ ಎನ್ನಲಾಗಿದೆ.
ಬ್ಯಾಂಕ್ ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ವಿರುದ್ಧ ಲಂಡನ್ ನ್ಯಾಯಾಲಯ ಸೋಮವಾರ ಬಂಧನ ವಾರಂಟ್ ಹೊರಡಿಸಿದೆ ಎಂದು ಇ.ಡಿ. ಮಂಗಳವಾರ ಹೇಳಿತ್ತು.