ಗುಪ್ತಾ ಸೇರಿದಂತೆ ನಾಲ್ವರು ಅಪರಾಧಿಗಳಿಗೆ ಮಾರ್ಚ್ 3ರಂದು ಮರಣದಂಡನೆ ಜಾರಿ ಮಾಡುವಂತೆ ದೆಹಲಿಯ ಪಾಟಿಯಾಲಹೌಸ್ ನ್ಯಾಯಾಲಯ ಇತ್ತೀಚೆಗೆ ವಾರೆಂಟ್ ನೀಡಿತ್ತು. ಇದರ ಬೆನ್ನಲ್ಲೇ, ಪ್ರಕರಣದ ಇನ್ನೊಬ್ಬ ಅಪರಾಧಿ ವಿನಯ್ ಶರ್ಮಾ, ಜೈಲಿನ ಗೋಡೆಗೆ ತಲೆಯನ್ನು ಚಚ್ಚಿಕೊಂಡು ಗಾಯಮಾಡಿಕೊಂಡಿದ್ದ. ಈ ಮಧ್ಯೆ, ಅಪರಾಧಿ ವಿನಯ್ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ ಎಂದು ಆತನ ಪರ ವಕೀಲ ಎ.ಪಿ.ಸಿಂಗ್ ಹೇಳಿದ್ದರು. ಆದರೆ, ಇದೆಲ್ಲ ನ್ಯಾಯಾಲಯವನ್ನು ಹಾದಿ ತಪ್ಪಿಸುವ ಮೂಲಕ ನ್ಯಾಯಾದಾನ ಪ್ರಕ್ರಿಯೆ ವಿಳಂಬವಾಗುವಂತೆ ಮಾಡುವ ಹುನ್ನಾರ ಎಂದು ಸಂತ್ರಸ್ತೆಯ ತಾಯಿ ಆಶಾದೇವಿ ಬೇಸರ ವ್ಯಕ್ತಪಡಿಸಿದ್ದರು.