<p><strong>ನವದೆಹಲಿ:</strong> ನಿರ್ಭಯಾ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ನಾಲ್ವರಲ್ಲಿ ಒಬ್ಬನಾದ ಪವನ್ ಗುಪ್ತಾ ಪರಿಹಾರಾತ್ಮಕ (ಕ್ಯುರೇಟಿವ್) ಅರ್ಜಿ ಸಲ್ಲಿಸುವಲ್ಲಿ ವಿಳಂಬ ಮಾಡುತ್ತಿರುವ ಕುರಿತು ದೆಹಲಿಯ ಸೆಷನ್ಸ್ ನ್ಯಾಯಾಲಯ ಬುಧವಾರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಮೊದಲಿನ ವಕೀಲರನ್ನು ಕೈಬಿಟ್ಟಿರುವುದರಿಂದ ಹೊಸ ವಕೀಲರ ನೇಮಕಕ್ಕೆ ಸಮಯ ಬೇಕು ಎಂದು ಪವನ್ ನ್ಯಾಯಾಲಯಕ್ಕೆ ತಿಳಿಸಿದ. ಇದು ತಿಳಿದ ಬಳಿಕ ವಕೀಲರ ನೆರವು ಒದಗಿಸುವುದಾಗಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದ್ರ ರಾಣಾ ಹೇಳಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ (ಡಿಎಲ್ಎಸ್ಎ) ವಕೀಲರ ಪಟ್ಟಿಯನ್ನು ಪವನ್ ತಂದೆಗೆ ನೀಡಿದ್ದು, ವಕೀಲರನ್ನು ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದೆ.</p>.<p><strong>ವಸ್ತುಸ್ಥಿತಿ ವರದಿ ಸಲ್ಲಿಕೆ:</strong> ಈ ಮೊದಲು ಗಲ್ಲುಶಿಕ್ಷೆ ಜಾರಿಗೆ ಜ.22ರಂದು ದಿನ ನಿಗದಿಪಡಿಸಲಾಗಿತ್ತು. ಜ.17ರಂದು ವಿಚಾರಣಾ ನ್ಯಾಯಾಲಯ ತಡೆ ನೀಡಿದ ಬಳಿಕ ಇದನ್ನು ಫೆ.1ಕ್ಕೆ ಮುಂದೂಡಲಾಗಿತ್ತು. ನಂತರ ‘ಮುಂದಿನ ಆದೇಶದವರೆಗೆ ಗಲ್ಲುಶಿಕ್ಷೆ ಜಾರಿಗೆ ತಡೆಯಾಜ್ಞೆ’ ವಿಧಿಸಲಾಗಿದೆ ಎಂದು ಜ.31ರಂದು ನ್ಯಾಯಾಲಯ ತೀರ್ಪು ನೀಡಿತ್ತು.</p>.<p>ಈ ಸಂಬಂಧ ಫೆ.5ರಂದು ಆದೇಶ ನೀಡಿದ್ದ ದೆಹಲಿ ಹೈಕೋರ್ಟ್, ಮುಂದಿನ ಏಳು ದಿನಗಳಲ್ಲಿ ಅಪರಾಧಿಗಳು ಪರಿಹಾರಾತ್ಮಕ ಅರ್ಜಿ ಸಲ್ಲಿಸಬಹುದು ಎಂದು ಹೇಳಿತ್ತು. ಆದರೆ ಈ ಅವಧಿಯಲ್ಲಿ ನಾಲ್ವರು ಅಪರಾಧಿಗಳಲ್ಲಿ ಒಬ್ಬರೂ ಸಹ ಅರ್ಜಿ ಸಲ್ಲಿಸಿಲ್ಲ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಮಂಗಳವಾರ ವಿಚಾರಣಾ ನ್ಯಾಯಾಲಯಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿದ್ದಾರೆ.</p>.<p>ನಾಲ್ವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಜಾರಿಗೊಳಿಸಲು ಹೊಸದಾಗಿ ವಾರಂಟ್ ಹೊರಡಿಸಬೇಕು ಎಂದು ಕೋರಿ ನಿರ್ಭಯಾ ಪೋಷಕರು ಹಾಗೂ ದೆಹಲಿ ಸರ್ಕಾರದಿಂದ ಮಂಗಳವಾರವಷ್ಟೆ ದೆಹಲಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಿರ್ಭಯಾ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ನಾಲ್ವರಲ್ಲಿ ಒಬ್ಬನಾದ ಪವನ್ ಗುಪ್ತಾ ಪರಿಹಾರಾತ್ಮಕ (ಕ್ಯುರೇಟಿವ್) ಅರ್ಜಿ ಸಲ್ಲಿಸುವಲ್ಲಿ ವಿಳಂಬ ಮಾಡುತ್ತಿರುವ ಕುರಿತು ದೆಹಲಿಯ ಸೆಷನ್ಸ್ ನ್ಯಾಯಾಲಯ ಬುಧವಾರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಮೊದಲಿನ ವಕೀಲರನ್ನು ಕೈಬಿಟ್ಟಿರುವುದರಿಂದ ಹೊಸ ವಕೀಲರ ನೇಮಕಕ್ಕೆ ಸಮಯ ಬೇಕು ಎಂದು ಪವನ್ ನ್ಯಾಯಾಲಯಕ್ಕೆ ತಿಳಿಸಿದ. ಇದು ತಿಳಿದ ಬಳಿಕ ವಕೀಲರ ನೆರವು ಒದಗಿಸುವುದಾಗಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದ್ರ ರಾಣಾ ಹೇಳಿದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ (ಡಿಎಲ್ಎಸ್ಎ) ವಕೀಲರ ಪಟ್ಟಿಯನ್ನು ಪವನ್ ತಂದೆಗೆ ನೀಡಿದ್ದು, ವಕೀಲರನ್ನು ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಿದೆ.</p>.<p><strong>ವಸ್ತುಸ್ಥಿತಿ ವರದಿ ಸಲ್ಲಿಕೆ:</strong> ಈ ಮೊದಲು ಗಲ್ಲುಶಿಕ್ಷೆ ಜಾರಿಗೆ ಜ.22ರಂದು ದಿನ ನಿಗದಿಪಡಿಸಲಾಗಿತ್ತು. ಜ.17ರಂದು ವಿಚಾರಣಾ ನ್ಯಾಯಾಲಯ ತಡೆ ನೀಡಿದ ಬಳಿಕ ಇದನ್ನು ಫೆ.1ಕ್ಕೆ ಮುಂದೂಡಲಾಗಿತ್ತು. ನಂತರ ‘ಮುಂದಿನ ಆದೇಶದವರೆಗೆ ಗಲ್ಲುಶಿಕ್ಷೆ ಜಾರಿಗೆ ತಡೆಯಾಜ್ಞೆ’ ವಿಧಿಸಲಾಗಿದೆ ಎಂದು ಜ.31ರಂದು ನ್ಯಾಯಾಲಯ ತೀರ್ಪು ನೀಡಿತ್ತು.</p>.<p>ಈ ಸಂಬಂಧ ಫೆ.5ರಂದು ಆದೇಶ ನೀಡಿದ್ದ ದೆಹಲಿ ಹೈಕೋರ್ಟ್, ಮುಂದಿನ ಏಳು ದಿನಗಳಲ್ಲಿ ಅಪರಾಧಿಗಳು ಪರಿಹಾರಾತ್ಮಕ ಅರ್ಜಿ ಸಲ್ಲಿಸಬಹುದು ಎಂದು ಹೇಳಿತ್ತು. ಆದರೆ ಈ ಅವಧಿಯಲ್ಲಿ ನಾಲ್ವರು ಅಪರಾಧಿಗಳಲ್ಲಿ ಒಬ್ಬರೂ ಸಹ ಅರ್ಜಿ ಸಲ್ಲಿಸಿಲ್ಲ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಮಂಗಳವಾರ ವಿಚಾರಣಾ ನ್ಯಾಯಾಲಯಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿದ್ದಾರೆ.</p>.<p>ನಾಲ್ವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಜಾರಿಗೊಳಿಸಲು ಹೊಸದಾಗಿ ವಾರಂಟ್ ಹೊರಡಿಸಬೇಕು ಎಂದು ಕೋರಿ ನಿರ್ಭಯಾ ಪೋಷಕರು ಹಾಗೂ ದೆಹಲಿ ಸರ್ಕಾರದಿಂದ ಮಂಗಳವಾರವಷ್ಟೆ ದೆಹಲಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>