ಈ ಸಂಬಂಧ ಫೆ.5ರಂದು ಆದೇಶ ನೀಡಿದ್ದ ದೆಹಲಿ ಹೈಕೋರ್ಟ್, ಮುಂದಿನ ಏಳು ದಿನಗಳಲ್ಲಿ ಅಪರಾಧಿಗಳು ಪರಿಹಾರಾತ್ಮಕ ಅರ್ಜಿ ಸಲ್ಲಿಸಬಹುದು ಎಂದು ಹೇಳಿತ್ತು. ಆದರೆ ಈ ಅವಧಿಯಲ್ಲಿ ನಾಲ್ವರು ಅಪರಾಧಿಗಳಲ್ಲಿ ಒಬ್ಬರೂ ಸಹ ಅರ್ಜಿ ಸಲ್ಲಿಸಿಲ್ಲ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಮಂಗಳವಾರ ವಿಚಾರಣಾ ನ್ಯಾಯಾಲಯಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿದ್ದಾರೆ.