ನಿರ್ಭಯಾ ಪ್ರಕರಣದಲ್ಲಿ ಒಟ್ಟು ಆರು ಜನರನ್ನು ಅಪರಾಧಿಗಳನ್ನಾಗಿ ತೀರ್ಮಾನಿಸಲಾಗಿತ್ತು. ಇವರಲ್ಲೊಬ್ಬ ಅಪ್ರಾಪ್ತ ಜೈಲು ಶಿಕ್ಷೆಯನ್ನು ಅನುಭವಿಸಿ ನಂತರ ಬಿಡುಗಡೆಯಾಗಿದ್ದರೆ, ಮತ್ತೊಬ್ಬ ರಾಮ್ ಸಿಂಗ್ ಎಂಬಾತ ತಿಹಾರ್ ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದನು. ಉಳಿದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲಾಗಿತ್ತು. ಈ ಪೈಕಿ ಒಬ್ಬ ಅಪರಾಧಿ ಅಕ್ಷಯ್ ಸಿಂಗ್ ಮರಣ ದಂಡನೆಯನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಇತರ ಅಪರಾಧಿಗಳಾದ ಮುಕೇಶ್ ಸಿಂಗ್, ಪವನ್ ಗುಪ್ತಾ ಮತ್ತು ವಿನಯ್ ಶರ್ಮಾರ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಈಗಾಗಲೇ ತಿರಸ್ಕರಿಸಿದೆ.