ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ ಪ್ರಕರಣ: ಅಪರಾಧಿಯಿಂದ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ

Last Updated 31 ಜನವರಿ 2020, 6:48 IST
ಅಕ್ಷರ ಗಾತ್ರ

ನವದೆಹಲಿ: ಘಟನೆ ನಡೆದಾಗ ನಾನು ಅಪ್ರಾಪ್ತನಾಗಿದ್ದೆ ಆದ ಕಾರಣ ನನ್ನನ್ನು ಮರಣದಂಡನೆಗೆ ಒಳಪಡಿಸದಂತೆ ನಿರ್ಭಯಾ ಪ್ರಕರಣ ಅಪರಾಧಿ ಪವನ್ ಗುಪ್ತಾ ಶುಕ್ರವಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾನೆ.

ಅಪರಾಧಿ ಪವನ್ ಗುಪ್ತಾನ ಅರ್ಜಿಯನ್ನು ತ್ರಿಸದಸ್ಯ ಪೀಠ ವಜಾ ಮಾಡಿತ್ತು. ಈಗ ಸಾಂವಿಧಾನಿಕ ಪೀಠಕ್ಕೆ ಮೇಲ್ಮನವಿ ಸಲ್ಲಿಸುವ ಮೂಲಕ ಮರಣದಂಡನೆಯಿಂದ ಪಾರಾಗಲು ಪ್ರಯತ್ನಿಸುತ್ತಿದ್ದಾನೆ. 2012ರಲ್ಲಿ ಆರು ಮಂದಿ ಸೇರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ಸಂಬಂಧ ವಿಚಾರಣೆ ನಡೆಯುವಾಗಲೇ ಒಬ್ಬ ಮೃತಪಟ್ಟಿದ್ದ. ಮತ್ತೊಬ್ಬ ಅಪ್ರಾಪ್ತನಾಗಿದ್ದ ಕಾರಣ ಬಿಡುಗಡೆಗೊಳಿಸಲಾಗಿದ್ದು, ಉಳಿದ ನಾಲ್ಕು ಮಂದಿಗೆ ಮರಣ ದಂಡನೆ ವಿಧಿಸಲಾಗಿದೆ.

ಈಗಾಗಲೇ ಮೂರು ಮಂದಿಗೆ ಮರಣದಂಡನೆ ಖಚಿತವಾಗಿದೆ.

ಬಜೆಟ್ ಮಾಹಿತಿಗೆ: www.prajavani.net/budget-2020

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT