ಅಪರಾಧಿ ಪವನ್ ಗುಪ್ತಾನ ಅರ್ಜಿಯನ್ನು ತ್ರಿಸದಸ್ಯ ಪೀಠ ವಜಾ ಮಾಡಿತ್ತು. ಈಗ ಸಾಂವಿಧಾನಿಕ ಪೀಠಕ್ಕೆ ಮೇಲ್ಮನವಿ ಸಲ್ಲಿಸುವ ಮೂಲಕ ಮರಣದಂಡನೆಯಿಂದ ಪಾರಾಗಲು ಪ್ರಯತ್ನಿಸುತ್ತಿದ್ದಾನೆ. 2012ರಲ್ಲಿ ಆರು ಮಂದಿ ಸೇರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ಸಂಬಂಧ ವಿಚಾರಣೆ ನಡೆಯುವಾಗಲೇ ಒಬ್ಬ ಮೃತಪಟ್ಟಿದ್ದ. ಮತ್ತೊಬ್ಬ ಅಪ್ರಾಪ್ತನಾಗಿದ್ದ ಕಾರಣ ಬಿಡುಗಡೆಗೊಳಿಸಲಾಗಿದ್ದು, ಉಳಿದ ನಾಲ್ಕು ಮಂದಿಗೆ ಮರಣ ದಂಡನೆ ವಿಧಿಸಲಾಗಿದೆ.