ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳ ಪೈಕಿ ಇಬ್ಬರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಪರಿಹಾರಾತ್ಮಕ ಅರ್ಜಿಯ ವಿಚಾರಣೆ ಇದೇ 14ರಂದು ಮಧ್ಯಾಹ್ನ 1.45ಕ್ಕೆ ನಡೆಯಲಿದೆ.
ಪ್ರಕರಣದ ಅಪರಾಧಿಗಳಾದ ವಿನಯ್ ಶರ್ಮಾ ಮತ್ತು ಮುಕೇಶ್ ಕುಮಾರ್ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಇತರ ಅಪರಾಧಿಗಳಾದ ಅಕ್ಷಯ್ ಕುಮಾರ್ ಸಿಂಗ್ ಮತ್ತು ಪವನ್ ಗುಪ್ತಾ ವಿರುದ್ಧ ದೆಹಲಿಯ ನ್ಯಾಯಾಲಯವು ಮರಣದಂಡನೆ ವಾರಂಟ್ ಜಾರಿ ಮಾಡಿರುವುದರಿಂದ ಅವರು ಪರಿಹಾರಾತ್ಮಕ ಅರ್ಜಿ ಸಲ್ಲಿಸಿಲ್ಲ.
ಅಪರಾಧಿಗಳಿಗೆ ಇದೇ 22ರಂದು ಮರಣ ದಂಡನೆ ಜಾರಿ ಮಾಡುವಂತೆ ದೆಹಲಿಯ ನ್ಯಾಯಾಲಯವು ಮಂಗಳವಾರ ಆದೇಶ ನೀಡಿತ್ತು.