ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ ಪ್ರಕರಣ: ಪರಿಹಾರಾತ್ಮಕ ಅರ್ಜಿ ವಿಚಾರಣೆ 14ರಂದು

Last Updated 11 ಜನವರಿ 2020, 19:30 IST
ಅಕ್ಷರ ಗಾತ್ರ

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳ ಪೈಕಿ ಇಬ್ಬರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಪರಿಹಾರಾತ್ಮಕ ಅರ್ಜಿಯ ವಿಚಾರಣೆ ಇದೇ 14ರಂದು ಮಧ್ಯಾಹ್ನ 1.45ಕ್ಕೆ ನಡೆಯಲಿದೆ.

ನ್ಯಾಯಮೂರ್ತಿಗಳಾದ ಎನ್‌.ವಿ. ರಮಣ, ಅರುಣ್‌ ಮಿಶ್ರಾ, ಆರ್‌.ಎಫ್‌. ನರಿಮನ್‌, ಆರ್‌. ಭಾನುಮತಿ ಮತ್ತು ಅಶೋಕ್‌ ಭೂಷಣ್‌ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ನ್ಯಾಯಮೂರ್ತಿಗಳ ಕೊಠಡಿಯಲ್ಲಿ ವಿಚಾರಣೆ ನಡೆಯಲಿದೆ.

ಪ್ರಕರಣದ ಅಪರಾಧಿಗಳಾದ ವಿನಯ್‌ ಶರ್ಮಾ ಮತ್ತು ಮುಕೇಶ್‌ ಕುಮಾರ್‌ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇತರ ಅಪರಾಧಿಗಳಾದ ಅಕ್ಷಯ್‌ ಕುಮಾರ್‌ ಸಿಂಗ್ ಮತ್ತು ಪವನ್‌ ಗುಪ್ತಾ ವಿರುದ್ಧ ದೆಹಲಿಯ ನ್ಯಾಯಾಲಯವು ಮರಣದಂಡನೆ ವಾರಂಟ್‌ ಜಾರಿ ಮಾಡಿರುವುದರಿಂದ ಅವರು ಪರಿಹಾರಾತ್ಮಕ ಅರ್ಜಿ ಸಲ್ಲಿಸಿಲ್ಲ.

ಅಪರಾಧಿಗಳಿಗೆ ಇದೇ 22ರಂದು ಮರಣ ದಂಡನೆ ಜಾರಿ ಮಾಡುವಂತೆ ದೆಹಲಿಯ ನ್ಯಾಯಾಲಯವು ಮಂಗಳವಾರ ಆದೇಶ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT