<p><strong>ನವದೆಹಲಿ:</strong>ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳ ಪೈಕಿ ಇಬ್ಬರ ವಕೀಲರು ಮತ್ತೆ ದೆಹಲಿಯಪಟಿಯಾಲಹೌಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ತಿಹಾರ್ ಜೈಲು ಅಧಿಕಾರಿಗಳು ಕೆಲವು ದಾಖಲೆಗಳನ್ನು ಹಸ್ತಾಂತರಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p>.<p>ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಮತ್ತು ಪವನ್ ಸಿಂಗ್ ಪರ ಪರಿಹಾರಾತ್ಮಕ ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳನ್ನು ಜೈಲು ಅಧಿಕಾರಿಗಳು ಇನ್ನೂ ನೀಡಿಲ್ಲ ಎಂದು ವಕೀಲ ಎ.ಪಿ.ಸಿಂಗ್ ಹೇಳಿದ್ದಾರೆ. ಅರ್ಜಿ ಶನಿವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.</p>.<p>ಇನ್ನಿಬ್ಬರು ಅಪರಾಧಿಗಳಾದ ವಿನಯ್ ಕುಮಾರ್ ಶರ್ಮಾ ಮತ್ತು ಮುಕೇಶ್ ಸಿಂಗ್ ಪರಿಹಾರಾತ್ಮಕ ಅರ್ಜಿಯನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.</p>.<p>ನಿರ್ಭಯಾ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಜನವರಿ 22ರಂದು ಜಾರಿಗೊಳಿಸುವಂತೆಈ ಹಿಂದೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಆದರೆ, ಅಪರಾಧಿಗಳ ಪೈಕಿ ಇಬ್ಬರು ಕ್ಷಮಾದಾನ ಅರ್ಜಿ ಸಲ್ಲಿಸಿದ್ದರಿಂದ ದಿನಾಂಕವನ್ನು ಫೆಬ್ರುವರಿ 1ಕ್ಕೆಮುಂದೂಡಲಾಗಿತ್ತು. ಈ ಮಧ್ಯೆ,ಗಲ್ಲುಶಿಕ್ಷೆಗೆ ಗುರಿಯಾದವರು ಕ್ಷಮಾದಾನ ಅರ್ಜಿ ಸಲ್ಲಿಸಲು ಬಯಸುವುದಾದರೆ, ಶಿಕ್ಷೆ ಜಾರಿಯಾದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಮನವಿ ಮಾಡಿ ಕೇಂದ್ರ ಗೃಹ ಸಚಿವಾಲಯ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/centre-moves-sc-seeking-seven-day-deadline-for-hanging-death-row-convicts-699975.html" target="_blank">ಗಲ್ಲು ಶಿಕ್ಷೆ ಜಾರಿಗೆ 7 ದಿನ ಗಡುವು ವಿಧಿಸಲು ಸುಪ್ರೀಂ ಕೋರ್ಟ್ಗೆ ಕೇಂದ್ರ ಮನವಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳ ಪೈಕಿ ಇಬ್ಬರ ವಕೀಲರು ಮತ್ತೆ ದೆಹಲಿಯಪಟಿಯಾಲಹೌಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ತಿಹಾರ್ ಜೈಲು ಅಧಿಕಾರಿಗಳು ಕೆಲವು ದಾಖಲೆಗಳನ್ನು ಹಸ್ತಾಂತರಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p>.<p>ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಮತ್ತು ಪವನ್ ಸಿಂಗ್ ಪರ ಪರಿಹಾರಾತ್ಮಕ ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳನ್ನು ಜೈಲು ಅಧಿಕಾರಿಗಳು ಇನ್ನೂ ನೀಡಿಲ್ಲ ಎಂದು ವಕೀಲ ಎ.ಪಿ.ಸಿಂಗ್ ಹೇಳಿದ್ದಾರೆ. ಅರ್ಜಿ ಶನಿವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.</p>.<p>ಇನ್ನಿಬ್ಬರು ಅಪರಾಧಿಗಳಾದ ವಿನಯ್ ಕುಮಾರ್ ಶರ್ಮಾ ಮತ್ತು ಮುಕೇಶ್ ಸಿಂಗ್ ಪರಿಹಾರಾತ್ಮಕ ಅರ್ಜಿಯನ್ನು ಇತ್ತೀಚೆಗೆ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.</p>.<p>ನಿರ್ಭಯಾ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆಯನ್ನು ಜನವರಿ 22ರಂದು ಜಾರಿಗೊಳಿಸುವಂತೆಈ ಹಿಂದೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಆದರೆ, ಅಪರಾಧಿಗಳ ಪೈಕಿ ಇಬ್ಬರು ಕ್ಷಮಾದಾನ ಅರ್ಜಿ ಸಲ್ಲಿಸಿದ್ದರಿಂದ ದಿನಾಂಕವನ್ನು ಫೆಬ್ರುವರಿ 1ಕ್ಕೆಮುಂದೂಡಲಾಗಿತ್ತು. ಈ ಮಧ್ಯೆ,ಗಲ್ಲುಶಿಕ್ಷೆಗೆ ಗುರಿಯಾದವರು ಕ್ಷಮಾದಾನ ಅರ್ಜಿ ಸಲ್ಲಿಸಲು ಬಯಸುವುದಾದರೆ, ಶಿಕ್ಷೆ ಜಾರಿಯಾದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಮನವಿ ಮಾಡಿ ಕೇಂದ್ರ ಗೃಹ ಸಚಿವಾಲಯ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/centre-moves-sc-seeking-seven-day-deadline-for-hanging-death-row-convicts-699975.html" target="_blank">ಗಲ್ಲು ಶಿಕ್ಷೆ ಜಾರಿಗೆ 7 ದಿನ ಗಡುವು ವಿಧಿಸಲು ಸುಪ್ರೀಂ ಕೋರ್ಟ್ಗೆ ಕೇಂದ್ರ ಮನವಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>