<p><strong>ನವದೆಹಲಿ:</strong> ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮಾರ್ಚ್ 3ರ ಬೆಳಿಗ್ಗೆ ಆರು ಗಂಟೆಗೆಗಲ್ಲು ಶಿಕ್ಷೆ ಜಾರಿಗೊಳಿಸುವಂತೆ ದೆಹಲಿ ಕೋರ್ಟ್ ಸೋಮವಾರ ತೀರ್ಪು ನೀಡಿದೆ.</p>.<p>2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಾದ ಮುಕೇಶ್ ಕುಮಾರ್ಸಿಂಗ್, ಪವನ್ ಗುಪ್ತಾ, ವಿನಯ್ಕುಮಾರ್ ಶರ್ಮಾ, ಅಕ್ಷಯ್ ಕುಮಾರ್ ಅವರನ್ನು ಗಲ್ಲಿಗೇರಿಸುವಂತೆ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಧರ್ಮೇಂದ್ರ ರಾಣಾ ಆದೇಶ ಹೊರಡಿಸಿದ್ದಾರೆ.</p>.<p>ಒಂದು ವಾರದ ಒಳಗೆ ಕಾನೂನಾತ್ಮಕ ಪರಿಹಾರಗಳನ್ನು ಅಪರಾಧಿಗಳು ಪಡೆದುಕೊಳ್ಳಬಹುದು ಎಂದು ದೆಹಲಿ ಹೈಕೋರ್ಟ್ ಫೆ. 5ರಂದು ಆದೇಶ ನೀಡಿತ್ತು. ಅಪರಾಧಿಗಳು ಈ ಗಡುವಿನೊಳಗೆ ಈ ಅವಕಾಶವನ್ನು ಬಳಸಿಕೊಂಡಿಲ್ಲ. ಹಾಗಾಗಿ, ಗಲ್ಲು ಶಿಕ್ಷೆ ಜಾರಿಗೆ ಹೊಸ ದಿನಾಂಕ ನಿಗದಿ ಮಾಡಲು ಯಾವುದೇ ತೊಡಕು ಇಲ್ಲ ಎಂದು ನ್ಯಾಯಾಲಯ ತಿಳಿಸಿದೆ.</p>.<p>ಅಪರಾಧಿ ವಿನಯ್ ಮಾನಸಿಕವಾಗಿ ಅಸ್ವಸ್ಥನಾಗಿದ್ದು, ಈ ಬಗ್ಗೆ ತಿಹಾರ್ ಜೈಲು ಪ್ರಾಧಿಕಾರದಿಂದ ವರದಿಯನ್ನು ತರಿಸಿಕೊಳ್ಳಬಹುದು ಎಂದು ಆತನ ಪರ ವಕೀಲ ಎ.ಪಿ.ಸಿಂಗ್ ಹೇಳಿದರು. ಅಕ್ಷಯ್ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿ ವಜಾ ಆಗಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಲು ಆತ ಬಯಸಿದ್ದಾನೆ ಎಂದರು.</p>.<p>ಆದರೆ, ಈ ವಾದವನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ. ವಿನಯ್ ಮಾನಸಿಕ ಅಸ್ವಸ್ಥ ಎಂಬ ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ಅದಲ್ಲದೆ, ಪರಿಹಾರಾತ್ಮಕ ಅರ್ಜಿ ಸಲ್ಲಿಸಲು ಅಕ್ಷಯ್ ಸಿದ್ಧತೆ ನಡೆಸುತ್ತಿದ್ದಾನೆ ಎಂಬುದು ಮರಣ ದಂಡನೆ ಜಾರಿ ಮುಂದೂಡಲು ಕಾರಣವಾಗುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮಾರ್ಚ್ 3ರ ಬೆಳಿಗ್ಗೆ ಆರು ಗಂಟೆಗೆಗಲ್ಲು ಶಿಕ್ಷೆ ಜಾರಿಗೊಳಿಸುವಂತೆ ದೆಹಲಿ ಕೋರ್ಟ್ ಸೋಮವಾರ ತೀರ್ಪು ನೀಡಿದೆ.</p>.<p>2012ರಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಾದ ಮುಕೇಶ್ ಕುಮಾರ್ಸಿಂಗ್, ಪವನ್ ಗುಪ್ತಾ, ವಿನಯ್ಕುಮಾರ್ ಶರ್ಮಾ, ಅಕ್ಷಯ್ ಕುಮಾರ್ ಅವರನ್ನು ಗಲ್ಲಿಗೇರಿಸುವಂತೆ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಧರ್ಮೇಂದ್ರ ರಾಣಾ ಆದೇಶ ಹೊರಡಿಸಿದ್ದಾರೆ.</p>.<p>ಒಂದು ವಾರದ ಒಳಗೆ ಕಾನೂನಾತ್ಮಕ ಪರಿಹಾರಗಳನ್ನು ಅಪರಾಧಿಗಳು ಪಡೆದುಕೊಳ್ಳಬಹುದು ಎಂದು ದೆಹಲಿ ಹೈಕೋರ್ಟ್ ಫೆ. 5ರಂದು ಆದೇಶ ನೀಡಿತ್ತು. ಅಪರಾಧಿಗಳು ಈ ಗಡುವಿನೊಳಗೆ ಈ ಅವಕಾಶವನ್ನು ಬಳಸಿಕೊಂಡಿಲ್ಲ. ಹಾಗಾಗಿ, ಗಲ್ಲು ಶಿಕ್ಷೆ ಜಾರಿಗೆ ಹೊಸ ದಿನಾಂಕ ನಿಗದಿ ಮಾಡಲು ಯಾವುದೇ ತೊಡಕು ಇಲ್ಲ ಎಂದು ನ್ಯಾಯಾಲಯ ತಿಳಿಸಿದೆ.</p>.<p>ಅಪರಾಧಿ ವಿನಯ್ ಮಾನಸಿಕವಾಗಿ ಅಸ್ವಸ್ಥನಾಗಿದ್ದು, ಈ ಬಗ್ಗೆ ತಿಹಾರ್ ಜೈಲು ಪ್ರಾಧಿಕಾರದಿಂದ ವರದಿಯನ್ನು ತರಿಸಿಕೊಳ್ಳಬಹುದು ಎಂದು ಆತನ ಪರ ವಕೀಲ ಎ.ಪಿ.ಸಿಂಗ್ ಹೇಳಿದರು. ಅಕ್ಷಯ್ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿ ವಜಾ ಆಗಿದ್ದರೂ ಹೊಸದಾಗಿ ಅರ್ಜಿ ಸಲ್ಲಿಸಲು ಆತ ಬಯಸಿದ್ದಾನೆ ಎಂದರು.</p>.<p>ಆದರೆ, ಈ ವಾದವನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ. ವಿನಯ್ ಮಾನಸಿಕ ಅಸ್ವಸ್ಥ ಎಂಬ ವಾದವನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ಅದಲ್ಲದೆ, ಪರಿಹಾರಾತ್ಮಕ ಅರ್ಜಿ ಸಲ್ಲಿಸಲು ಅಕ್ಷಯ್ ಸಿದ್ಧತೆ ನಡೆಸುತ್ತಿದ್ದಾನೆ ಎಂಬುದು ಮರಣ ದಂಡನೆ ಜಾರಿ ಮುಂದೂಡಲು ಕಾರಣವಾಗುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>