ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ರಪತಿ ಶಿವಾಜಿ ದೇಶ ಪ್ರೇಮಿ: ಶಾಸಕ ಬಣಕಾರ

Last Updated 20 ಫೆಬ್ರುವರಿ 2018, 9:51 IST
ಅಕ್ಷರ ಗಾತ್ರ

ಹಿರೇಕೆರೂರ: ‘ತಾಯಿಯ ಆಶ್ರಯದಲ್ಲಿ ಬೆಳೆದ ಛತ್ರಪತಿ ಶಿವಾಜಿ ದೇಶ ಪ್ರೇಮಿಯಾದ. ಸ್ವರಾಜ್ಯ ಸ್ಥಾಪಿಸಿ ಅದನ್ನು ಉಳಿಸಲು ಹೋರಾಡಿದ ಮಹಾನ್ ವ್ಯಕ್ತಿ. ಅವರ ಆದರ್ಶಗಳು ಎಲ್ಲರಿಗೂ ಅಗತ್ಯ’ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಾರ್ಯಾ ಲಯದ ಸಭಾ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಸೋಮವಾರ ನಡೆದ ‘ಛತ್ರಪತಿ ಶಿವಾಜಿ ಜಯಂತ್ಯುತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಹಶೀಲ್ದಾರ್ ಎ.ವಿ.ಶಿಗ್ಗಾಂವಿ ಪ್ರಾಸ್ತಾವಿಕ ಮಾತನಾಡಿ, ‘ಶಿವಾಜಿ ಮಹಾರಾಜ ಅಪ್ಪಟ ದೇಶ ಪ್ರೇಮಿ. ರಾಜ್ಯ ಕಟ್ಟಿ, ಸಾಮ್ರಾಜ್ಯ ವಿಸ್ತರಿಸಿ ಪ್ರಜೆಗಳಿಗೆ ಉತ್ತಮ ಆಡಳಿತ ನೀಡುವ ಮೂಲಕ ಅವರ ಮನದಲ್ಲಿ ಶಾಶ್ವತವಾಗಿ ಉಳಿದ’ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಮಹೇಶ ಗುಬ್ಬಿ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ರಾಜಶೇಖರ ಹಂಪಾಳಿ, ಸದಸ್ಯ ರಘು ಮಾಳಮ್ಮನವರ, ಶಿವಕುಮಾರ ತಿಪ್ಪಶೆಟ್ಟಿ, ಕರವೇ ತಾಲ್ಲೂಕು ಘಟಕ ಅಧ್ಯಕ್ಷ ಗಿರೀಶ ಬಾರ್ಕಿ, ಚಂದ್ರು ಉಣಕಲ್, ಮುಖ್ಯಾಧಿಕಾರಿ ರಾಜಾರಾಂ ಪವಾರ, ಸಿಡಿಪಿಒ ಶ್ರೀನಿವಾಸ ಆಲದಾರ್ತಿ, ಕ್ಷತ್ರಿಯ ಮರಾಠ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ರಾಮರಾವ ಕರಾತ, ಕಿರಣಕುಮಾರ ಬಾಜಿ, ಮಾಲತೇಶ ಸಿಂದೆ, ರಾಘು ಸಿಂದೆ, ಉದಯ ಕೋಲ್ಲಾಪುರ ಇದ್ದರು.

ಶಿಗ್ಗಾವಿ: ‘ನ್ಯಾಯ ಸಮ್ಮತವಾಗಿ ರಾಜ್ಯ ಆಡಳಿತ ನಡೆಸಿ, ಪ್ರಜೆಗಳ ಹಿತಕ್ಕಾಗಿ ಹೋರಾಡಿದ ಛತ್ರಪತಿ ಶಿವಾಜಿ ಆಡಳಿತ ಇಂದಿನ ಪ್ರಜಾಪ್ರಭುತ್ವಕ್ಕೆ ಪ್ರೇರಣೆಯಾಗಲಿ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದ ಸಂತೆ ಮೈದಾನದಲ್ಲಿ ತಾಲ್ಲೂಕ ಆಡಳಿತ, ತಾಲ್ಲೂಕು ಪಂಚಾಯ್ತಿ, ಪುರಸಭೆ ಹಾಗೂ ತಾಲ್ಲೂಕು ಕ್ಷತ್ರೀಯ ಮರಾಠಾ ಸಮಾಜದ ಸಹಯೋಗದಲ್ಲಿ ಸೋಮವಾರ ನಡೆದ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ತಾಯಿ ನೀಡಿದ ಸಂಸ್ಕಾರ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡು ಬೆಳೆದ ಶಿವಾಜಿ  ಉತ್ತಮ ಆಡಳಿತ ನೀಡುವಲ್ಲಿ ಯಶಸ್ವಿಯಾದ’ ಎಂದರು.

ಭರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಮಾತನಾಡಿ, ‘ಪ್ರತಿ ವರ್ಷ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾಪುರಸ್ಕಾರ ಮಾಡಲು ₹ 1 ಲಕ್ಷ ಠೇವಣಿ ಹಾಗೂ ಪಟ್ಟಣದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಮಾಡುವುದಾದರೆ ₹ 2ಲಕ್ಷ ನೀಡುತ್ತೇನೆ’ ಎಂದು ಭರವಸೆ ನೀಡಿದರು.

ತಾಲ್ಲೂಕು ಕ್ಷತ್ರೀಯ ಮರಾಠಾ ಸಮಾಜದ ಅಧ್ಯಕ್ಷ ಸುಭಾಸ ಚವ್ಹಾಣ ಮಾತನಾಡಿದರು. ಬಂಕಾಪುರ ಸರ್ಕಾರಿ ಪದವಿ ಕಾಲೇಜಿನ ಪ್ರಾಧ್ಯಾಪಕ ಮಂಜುನಾಥ ನಾಯಕ ಉಪನ್ಯಾಸ ನೀಡಿದರು.

ಚಂದ್ರಪ್ಪಜ್ಜ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪಾರವ್ವ ಆರೇರ್‌, ಪುರಸಭೆ ಅಧ್ಯಕ್ಷ ಶಿವಪ್ರಸಾದ ಸುರಗೀಮಠ, ಉಪಾಧ್ಯಕ್ಷ ಪರಶುರಾಮ ಸೊನ್ನದ, ಸದಸ್ಯರಾದ ಶ್ರೀಕಾಂತ ಮಾಡಿಕ, ವೀಣಾ ಕುಡೆಕರ, ರೂಪಾ ಬನ್ನಿಕೊಪ್ಪ ಮುಖಂಡರಾದ ಫಕ್ಕಿರಪ್ಪ ಕುಂದೂರ, ಕೇದಾರೆಪ್ಪ ಬಗಾಡೆ, ಅಶೋಕ ಕಾಳೆ, ಬಿಇಒ ಶಿವಾನಂದ ಹೆಳವರ, ತಾಲ್ಲೂಕು ಪಂಚಾಯ್ತಿ ಇಒ ಹನುಂತರಾಜು ಇದ್ದರು. ಇದಕ್ಕೂ ಮುನ್ನ ಶಿವಾಜಿ ಭಾವ ಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಯಲ್ಲಿ ಸಕಲವಾದ್ಯ ವೈಭವ ದೊಂದಿಗೆ ಅದ್ಧೂರಿ ಮೆರವಣಿಗೆ ಮಾಡಲಾಯಿತು.

ರಾಣೆಬೆನ್ನೂರು: ‘ಶಿವಾಜಿ ಅಪ್ರತಿಮ ಯೋಧ ಮತ್ತು ಯಶಸ್ವಿ ಸೇನಾನಿ ಮಾತ್ರವಲ್ಲದೇ, ಜನತೆಗೆ ಜ್ಞಾನ ನೀಡಿದ ದೊರೆಯೂ ಆಗಿದ್ದರು’ ಎಂದು ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶ ಕೋಳಿವಾಡ ಬಣ್ಣಿಸಿದರು.

ಇಲ್ಲಿನ ಮೇಡ್ಲೇರಿ ರಸ್ತೆಯ ವಾಗೀಶ ನಗರದ ಆದಿಶಕ್ತಿ ದೇವಸ್ಥಾನದ ಸಭಾಭವನದಲ್ಲಿ ಸೋಮವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರವು, ಮಹಾನ್‌ ಪುರುಷರ ಜಯಂತಿಯನ್ನು ಆಚರಿಸುವ ಮೂಲಕ ಅವರನ್ನು ಸ್ಮರಿಸುತ್ತಿದೆ’ ಎಂದರು. ಜಿಲ್ಲಾ ಪಂಚಾಯ್ತಿ ಸದಸ್ಯ ಏಕನಾಥ ಭಾನುವಳ್ಳಿ ಮಾತನಾಡಿ, ‘ಛತ್ರಪತಿ ಶಿವಾಜಿ ಯಶಸ್ವಿ ಆಡಳಿತಗಾರರೂ, ರಾಜತಾಂತ್ರಿಕ ನಿಪುಣರೂ ಆಗಿದ್ದ ಅವನು ಸದ್ಗುಣಗಳನ್ನು ಹೊಂದಿದ್ದರು’ ಎಂದರು. ಸಾಮಾಜಿಕ ಕಾರ್ಯಕರ್ತ ಶಶಿಧರ ಹೊಸಳ್ಳಿ ಮತ್ತು ಛತ್ರಪತಿ ಲಂಗದಹಳ್ಳಿ ಉಪಾನ್ಯಾಸ ನೀಡಿದರು.

ಬಾಲ ಶಿವಾಜಿ ವೇಷ ತೊಟ್ಟ ಶ್ರೀಹರಿ ಗಮನ ಸೆಳೆದರು. ಕ್ಷತ್ರೀಯ ಮರಾಠಾ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಮಾಕನೂರ, ಮರಿಯಪ್ಪ ನಲವಾಗಲ, ಸ್ವಾಭಿಮಾನಿ ಕರವೇ ರಾಜ್ಯ ಘಟಕದ ಅಧ್ಯಕ್ಷ ನಿತ್ಯಾನಂದ ಕುಂದಾಪುರ, ಬಿಜೆಪಿ ಮುಖಂಡ ಅರುಣಕುಮಾರ ಪೂಜಾರ ಮತ್ತು ಜಿಲ್ಲಾ ಪಂಚಾಯ್ತಿ ಸದಸ್ಯರಾದ ಮಂಗಳಗೌರಿ ಎ. ಪೂಜಾರ, ತುಮ್ಮಿನಕಟ್ಟಿಯ ಗಿರಿಜವ್ವ ಬ್ಯಾಲದಹಳ್ಳಿ, ಎಪಿಎಂಸಿ ಅಧ್ಯಕ್ಷ ಮಂಜನಗೌಡ ಪಾಟೀಲ, ಸದಸ್ಯ ಬಸವರಾಜ ಹುಲ್ಲತ್ತಿ, ತಾಲ್ಲೂಕು ಪಂಚಾಯ್ತಿ ಸದಸ್ಯ ರಾಜು ಸೂರ್ವೆ, ವರ್ತಕ ವಾಸಪ್ಪ ಕುಸಗೂರ, ನಗರಸಭೆ ಸದಸ್ಯರಾದ ರತ್ನಾ ಪುನೀತ, ರಾಮಪ್ಪ ಹರಿಹರ, ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಎಂ.ವಿ.ಗಿರಡ್ಡಿ, ಸರ್ಕಲ್‌ ಇನ್ ಸ್ಪೆಕ್ಟರ್‌ ಮಂಜುನಾಥ ನಲವಾಗಲ, ದೈಹಿಕ ಶಿಕ್ಷಣಾಧಿಕಾರಿ ಎ.ಬಿ.ಚಂದ್ರಶೇಖರ ಇದ್ದರು.

ಭಾವಚಿತ್ರದ ಮೆರವಣಿಗೆ: ಇದಕ್ಕೂ ಮೊದಲು ಛತ್ರಪತಿ ಶಿವಾಜಿ ಭಾವಚಿತ್ರದ ಮೆರವಣಿಗೆಯು ಸಕಲ ವಾದ್ಯಗಳೊಂದಿಗೆ ಕುರುಬಗೇರಿಯಿಂದ ಪ್ರಾರಂಭವಾಗಿ ನಗರದ ಪ್ರಮುಖ ಬೀದಿ ಗಳಲ್ಲಿ ಸಂಚರಿಸಿ ಆದಿಶಕ್ತಿ ದೇವಸ್ಥಾನಕ್ಕೆ ಬಂದಿತು. ಗಣ್ಯರು ಭಾವಚಿತ್ರಕ್ಕೆ ಹೂ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು.

ಹಾವೇರಿ: ‘ಅತ್ಯುತ್ತಮ ಆಡಳಿತದಿಂದ ವಿಶ್ವದ ಗಮನ ಸೆಳೆದ ಶಿವಾಜಿ ತತ್ವಾದರ್ಶಗಳು ಸಾರ್ವಕಾಲಿಕವಾಗಿವೆ’ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ ಹೇಳಿದರು.

ನಗರದ ತಾಲ್ಲೂಕು ಮರಾಠ ಸಮುದಾಯ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಶಿವಾಜಿ ಹೋರಾಟ, ಉತ್ತಮ ಆಡಳಿತದ ಮೂಲಕ ಜನಪ್ರೀಯ ವಾಗಿದ್ದು, ಅವರ ಆಡಳಿತ, ಹೋರಾಟ, ಉತ್ತಮ ಮನೋಭಾವ, ಆದರ್ಶಗಳು ಇಂದಿಗೂ ಮಾದರಿಯಾಗಿವೆ’ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜೀವಕುಮಾರ್ ನೀರಲಗಿ ಮಾತನಾಡಿ, ‘ಶಿವಾಜಿ ಮಹಾರಾಜರು ಬಾಲ್ಯದಿಂದಲೇ ಹೋರಾಟ ಮನೋಭಾವ ಬೆಳೆಸಿಕೊಂಡಿದ್ದರು. ಅಪ್ರತಿಮ ಹೋರಾಟಗಾರರು ಆಗಿದ್ದರು. ಸಾಧಿಸುವ ಛಲಕ್ಕೆ ಶಿವಾಜಿ ಮಹಾರಾಜರು ಹೆಸರುವಾಸಿಯಾಗಿ ದ್ದರು’ ಎಂದು ಬಣ್ಣಿಸಿದರು.

ನೂತನ ಮರಾಠ ಸಮುದಾಯ ಭವನದ ನಿರ್ಮಾಣಕ್ಕೆ ಸಚಿವರ ಜೊತೆ ಚರ್ಚಿಸಿ ಅನುದಾನ ಒದಗಿಸಲಾಗು ವುದು ಎಂದು ಭರವಸೆ ನೀಡಿದರು. ಹಂಪಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ವಿಠಲರಾವ್ ಟಿ.ಗಾಯಕವಾಡ ಉಪನ್ಯಾಸ ನೀಡಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮರಾಠ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ನಗರಸಭೆ ಅಧ್ಯಕ್ಷೆ ಪಾರ್ವತೆಮ್ಮ ಹಲಗಣ್ಣನವರ, ಕರ್ನಾಟಕ ಕ್ಷತ್ರೀಯ ಮರಾಠ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎನ್.ವೆಂಕೋಜಿ, ನಗರಸಭೆ ಸದಸ್ಯರಾದ ಹನುಮಂತಪ್ಪ ಶರಸುರಿ, ಲಕ್ಷ್ಮೀಬಾಯಿ ಕಲಕೋಟಿ, ತಹಶೀಲ್ದಾರ್ ಜಗದೀಶ ಮಜ್ಜಗಿ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT