ಅಪರಾಧಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಡಿ.17) ವಿಚಾರಣೆ ನಡೆಸಲಿದೆ. ಹೀಗಾಗಿ ಅದಕ್ಕೂ ಮುನ್ನ ಗಲ್ಲು ಶಿಕ್ಷೆ ಜಾರಿಯಾಗದು ಎಂದು ನಿರ್ಭಯಾ ಪೋಷಕರ ಪರ ವಕೀಲ ಜಿತೇಂದ್ರ ಕುಮಾರ್ ಹೇಳಿದ್ದಾರೆ. ಈ ಕಾನೂನು ಕ್ರಮಗಳು ಅಪರಾಧಿಗಳ ಗಲ್ಲು ಶಿಕ್ಷೆಯನ್ನು ವಿಳಂಬ ಮಾಡುವ ತಂತ್ರಗಳು ಎಂದೂ ಅವರು ಹೇಳಿದ್ದಾರೆ.