ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕುಗಳ ವಿಲೀನ: ನೌಕರರಿಗೆ ಭಯಬೇಡ- ಸಚಿವೆ ನಿರ್ಮಲಾ ಸೀತಾರಾಮನ್

Last Updated 1 ಸೆಪ್ಟೆಂಬರ್ 2019, 12:14 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನ ಪ್ರಕ್ರಿಯೆಯಲ್ಲಿ ಒಬ್ಬನೇ ಒಬ್ಬ ನೌಕರನೂ ಕೆಲಸ ಕಳೆದುಕೊಳ್ಳುವುದಿಲ್ಲ, ಈ ಕುರಿತು ಆತಂಕಬೇಡಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಬಂಡವಾಳ ಹೂಡಿಕೆ, ಆರ್ಥಿಕ ಸ್ಥಿತಿಸುಧಾರಣೆಗಾಗಿ 10 ಬ್ಯಾಂಕುಗಳನ್ನು ನಾಲ್ಕು ಬ್ಯಾಂಕುಗಳನ್ನಾಗಿ ಮಾಡಲಾಗಿದೆ. ಇದರಿಂದ ಬ್ಯಾಂಕ್ ನೌಕರರು ಹುದ್ದೆ ಕಳೆದುಕೊಳ್ಳುತ್ತಾರೆ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ ಶುಕ್ರವಾರ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ ಎಂದು ಪ್ರಕಟಿಸಲಾಗಿತ್ತು. ಈ ಬೆಳವಣಿಗೆ ಕುರಿತು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಅಭಿಪ್ರಾಯ ವ್ಯಕ್ತಪಡಿಸಿ, ಈ ಪ್ರಕ್ರಿಯೆಯಿಂದಾಗಿ ಬ್ಯಾಂಕುಗಳಲ್ಲಿ ನೌಕರರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಆತಂಕ ವ್ಯಕ್ತಪಡಿಸಿತ್ತು.

ನಾನು ಭರವಸೆ ನೀಡುತ್ತೇನೆ. ಕೆಲಸ ಕಳೆದುಕೊಳ್ಳುವ ಭಯಬೇಡ, ನಾನು ಕಳೆದ ಶುಕ್ರವಾರ ಹೇಳಿದ ಹೇಳಿಕೆಯನ್ನು ಮತ್ತೊಮ್ಮೆ ನೆನಪಿಸಿಕೊಳ್ಳಿ, ಆಗ ನಾನು ಕೇವಲ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಕುರಿತು ಮಾತ್ರ ಹೇಳಿದ್ದೆ. ಯಾವುದೇ ನೌಕರರನ್ನೂ ತೆಗೆದುಹಾಕುವುದಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT