ನಿಸರ್ಗ ಚಂಡಮಾರುತವು ಮಹಾರಾಷ್ಟ್ರ ಕರಾವಳಿ ತಲುಪಿದೆ. ಚಂಡಮಾರುತದ ಅಪ್ಪಳಿಸುವಿಕೆ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಮುಂದಿನ ಮೂರು ಗಂಟೆಗಳಲ್ಲಿ ಇದು ಪೂರ್ಣಗೊಳ್ಳಬಹುದು. ಚಂಡಮಾರುತದ ಪ್ರಭಾವ ಮುಂದಿನ ಕೆಲವು ಗಂಟೆಗಳಲ್ಲಿ ಇನ್ನಷ್ಟು ತೀವ್ರಗೊಳ್ಳಬಹುದು. ತಗ್ಗು ಪ್ರದೇಶಗಳಲ್ಲಿರುವ ಎಚ್ಚರವಹಿಸಬೇಕು ಎಂದು ಇಲಾಖೆ ಎಚ್ಚರಿಕೆ ನೀಡಿದೆ.