ಸೋಂಕು ದೃಢಪಟ್ಟಿರುವ ವರದಿ ಮಂಗಳವಾರ ಬೆಳಗ್ಗೆ 9 ಗಂಟೆಗೆ ಅವರಿಗೆ ದೊರಕಿತು. ತಕ್ಷಣ ಅವರು ಅಧಿಕಾರಿಗಳಿಗೆ ಈ ವಿಷಯ ತಿಳಿಸಿದರು. ಅವರೊಂದಿಗೆ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳಿಗೆ ಕ್ವಾರಂಟೈನ್ನಲ್ಲಿರುವಂತೆ ಸೂಚಿಸಲಾಗಿದೆ. ಆರೋಗ್ಯ ಸಚಿವಾಲಯಕ್ಕೆ ಈ ವಿಷಯ ತಿಳಿಸಲಾಗಿದೆ ಎಂದು ನೀತಿ ಆಯೋಗದ ಸಲಹೆಗಾರ ಅಲೋಕ್ ಕುಮಾರ್ ತಿಳಿಸಿದ್ದಾರೆ.