ತಕ್ಷಣವೇ ಗಡ್ಕರಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯಕೀಯ ತಪಾಸಣೆ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.ಅಲ್ಲಿಂದ ಗಡ್ಕರಿ ಶಿರಡಿಗೆ ಹೋಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ಮಹಾತ್ಮ ಫುಲೆ ಕೃಷಿ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಭಾಗವಹಿಸಿದ್ದ ಗಡ್ಕರಿ, ತಮ್ಮ ಭಾಷಣ ಮುಗಿಸಿ ಕುಳಿತುಕೊಂಡಿದ್ದರು. ಆಮೇಲೆ ರಾಷ್ಟ್ರಗೀತೆಗಾಗಿ ನಿಂತುಕೊಂಡಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.