ವೇದಿಕೆಯಲ್ಲಿ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಮುಂಬೈ: ಮಹಾರಾಷ್ಟ್ರದ ಅಹಮದ್ನಗರದಲ್ಲಿ ನಡೆದ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಕುಸಿದು ಬಿದ್ದಿದ್ದಾರೆ.
ಕುಸಿದು ಬೀಳುತ್ತಿದ್ದಂತ ವೇದಿಕೆಯಲ್ಲಿದ್ದ ಮಹಾರಾಷ್ಟ್ರ ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್, ಗಡ್ಕರಿ ಅವರನ್ನು ಹಿಡಿದುಕೊಂಡಿದ್ದಾರೆ.
VIDEO: नितीन गडकरी चक्कर येऊन कोसळले https://t.co/sdZz2TUkow #NitinGadkari pic.twitter.com/nltq7EQhgg
— TV9 Marathi (@TV9Marathi) December 7, 2018
ತಕ್ಷಣವೇ ಗಡ್ಕರಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯಕೀಯ ತಪಾಸಣೆ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಅಲ್ಲಿಂದ ಗಡ್ಕರಿ ಶಿರಡಿಗೆ ಹೋಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ಮಹಾತ್ಮ ಫುಲೆ ಕೃಷಿ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಭಾಗವಹಿಸಿದ್ದ ಗಡ್ಕರಿ, ತಮ್ಮ ಭಾಷಣ ಮುಗಿಸಿ ಕುಳಿತುಕೊಂಡಿದ್ದರು. ಆಮೇಲೆ ರಾಷ್ಟ್ರಗೀತೆಗಾಗಿ ನಿಂತುಕೊಂಡಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಆರೋಗ್ಯ ಸ್ಥಿರ ಎಂದು ಟ್ವೀಟಿಸಿದ ಗಡ್ಕರಿ
ಲೋ ಶುಗರ್ನಿಂದಾಗಿ ಅಸ್ವಸ್ಥನಾಗಿದ್ದೆ, ವೈದ್ಯರನ್ನು ಭೇಟಿ ಮಾಡಿದ್ದು, ನಾನೀಗ ಆರಾಮವಾಗಿದ್ದೇನೆ. ನಿಮ್ಮ ಹಾರೈಕೆಗಳಿಗೆ ಧನ್ಯವಾದಗಳು ಗಡ್ಕರಿ ಟ್ವೀಟಿಸಿದ್ದಾರೆ.
Had slight medical condition due to low sugar. I have been attended by doctors and i am doing well now. I thank all of you for all the well wishes.
— Nitin Gadkari (@nitin_gadkari) December 7, 2018
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.