‘ಎರಡನೇ ಹಂತದ ಸಂಪುಟ ವಿಸ್ತರಣೆ ವೇಳೆ ಎಂ.ಬಿ.ಪಾಟೀಲ ಅವರಿಗೆ ಸಚಿವ ಸ್ಥಾನ ಸಿಗಬಹುದು, ಸಿಗದೇ ಇರಬಹುದು. ನನಗೆ ಸಹಕರಿಸುತ್ತೇನೆ ಎಂದು ಅವರೇ ಹೇಳಿದ್ದಾರೆ. ಹಿಂದಿನ ಸರ್ಕಾರದಲ್ಲಿ ಬಾಗಲಕೋಟೆ ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಲಾಗಿತ್ತು. ಈ ಬಾರಿ ವಿಜಯಪುರ ಜಿಲ್ಲೆಗೆ ಆ ಅವಕಾಶ ಸಿಕ್ಕರೆ ಸಂತೋಷ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ನೀಡಿದರೆ ನಿಭಾಯಿಸುವುದಾಗಿಯೂ ಹೇಳಿದರು.