ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮುಕಾಶ್ಮೀರ ವಿಧಾನಸಭೆ ವಿಸರ್ಜನೆಯಲ್ಲಿ ಬಿಜೆಪಿ ಪಾತ್ರವಿಲ್ಲ: ರಾಜನಾಥ್ ಸಿಂಗ್

Last Updated 23 ನವೆಂಬರ್ 2018, 13:08 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ವಿಸರ್ಜನೆ ವಿಚಾರ ಸಂಬಂಧ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ತೆಗೆದುಕೊಂಡ ನಿರ್ಧಾರದಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

‘ರಾಜಕೀಯ ವಿದ್ಯಮಾನವಗಳನ್ನು ಗಮನಿಸಿ ಜಮ್ಮು ಕಾಶ್ಮೀರ ರಾಜ್ಯಪಾಲರು,ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ (ಪಿಡಿಪಿ), ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ), ಕಾಂಗ್ರೆಸ್‌ ನಡುವಣ ಮೈತ್ರಿಯಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದರು’ ಎಂದ ಸಿಂಗ್‌, ‘ರಾಜ್ಯಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ.ಇದರಲ್ಲಿ ಬಿಜೆಪಿ ಪಾತ್ರವಿಲ್ಲ. ಕೆಲವರು ಇದರಲ್ಲಿ ಅನಾವಶ್ಯಕವಾಗಿ ಬಿಜೆಪಿಯನ್ನು ಎಳೆದು ತರುತ್ತಿರುವುದುದುರದೃಷ್ಟಕರ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.​

ಮಾಜಿ ಮುಖ್ಯಮಂತ್ರಿ ಮುಫ್ತಿ ಮೆಹಬೂಬಾ ಅವರು ಬಹುಮತ ಸಾಭೀತು ಪಡಿಸುವುದಾಗಿ ನೀಡಿದ್ದ ಹೇಳಿಕೆಯನ್ನು ಪ್ರಶ್ನಿಸಿದ ಅವರು, ‘ಕಾಂಗ್ರೆಸ್ ನಾಯಕ ಗುಲಾಮ್ ನಭಿ ಆಜಾದ್ ಅವರು ಪಿಡಿಪಿ ಸರ್ಕಾರ ರಚನೆಗೆ ನಮ್ಮ ಪಕ್ಷಬೆಂಬಲ ನೀಡುವುದಿಲ್ಲ ಎಂದಿದ್ದರು. ಅಕಸ್ಮಾತ್ ಮುಫ್ತಿ ಉತ್ತಮರೇ ಆಗಿದ್ದಲ್ಲಿ ಹೀಗೆ ಯಾಕೆ ಹೇಳಬೇಕಿತ್ತು?’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT