ಇದಾಗ್ಯೂ ಮಹಾರಾಷ್ಟ್ರ ಮುಖ್ಯಮಂತ್ರಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ‘ಸಿಎಎ, ಎನ್ಆರ್ಸಿ, ಎನ್ಪಿಆರ್ ಜಾರಿ ಮೂಲಕ ರಾಜ್ಯ ಯಾವುದೇ ಜನರಿಗೆ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ’ ಎಂದು ಪದೇ ಪದೇ ಸ್ಪಷ್ಟಪಡಿಸಿದ್ದಾರೆ.
ಸಿಎಎ ಕಾಯ್ದೆ ವಿರುದ್ಧವಾಗಿ ಕಾಂಗ್ರೆಸ್ ಸಾಕಷ್ಟು ಪ್ರತಿಭಟನೆಗಳನ್ನು ನಡೆಸಿದೆ. ಜನವರಿ 24ರಂದು ನಡೆದ ಸಿಎಎ ವಿರೋಧಿ ಪ್ರತಿಭಟನೆಗೆ ಮೊದಲ ಬಾರಿಗೆ ಎನ್ಸಿಪಿ ನಾಯಕ ಶರದ್ ಪವಾರ್ ಅವರ ನೇತೃತ್ವ ವಹಿಸಿದ್ದರು.