ಪ್ಲಾಸ್ಮಾ ಚಿಕಿತ್ಸೆಯಿಂದ ಕೆಲವು ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಕೆಲವು ಎಎಪಿ ನಾಯಕರು ದೆಹಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಆ ಚಿಕಿತ್ಸಾ ವಿಧಾನ ಅನುಸರಿಸಲು ಬೆಂಬಲಿಸಿದ್ದರು. ಸೋಂಕಿನಿಂದ ಚೇತರಿಸಿಕೊಂಡವರು ಪ್ಲಾಸ್ಮಾ ದಾನಕ್ಕೆ ಮುಂದೆಬರಬೇಕು ಎಂದು ಕೇಜ್ರಿವಾಲ್ ಬಹಿರಂಗವಾಗಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ.