ನವದೆಹಲಿ: ರೈಲು ಸಂಚಾರ ಪುನರಾರಂಭಿಸುವ ಕುರಿತು ಇನ್ನೂ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ರೈಲ್ವೆ ಸಚಿವಾಲಯ ಶನಿವಾರ ತಿಳಿಸಿದೆ.
ಏಪ್ರಿಲ್ 15ರಿಂದ ರೈಲು ಸೇವೆಗಳನ್ನು ಪುನರಾರಂಭಿಸಲು ಭಾರತೀಯ ರೈಲ್ವೆ ಸಿದ್ಧತೆ ಆರಂಭಿಸಿದೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಈ ಹೇಳಿಕೆ ನೀಡಿದೆ. ಈ ಕುರಿತು ಸದ್ಯದಲ್ಲಿಯೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.
‘ಹಂತ-ಹಂತವಾಗಿ ಯಾವ ರೈಲುಗಳ ಸಂಚಾರ ಆರಂಭಿಸಬೇಕು ಎಂಬ ಕ್ರಿಯಾಯೋಜನೆಯನ್ನು ರೈಲ್ವೆ ಮಂಡಳಿಗೆ ಸಲ್ಲಿಸುತ್ತೇವೆ. ಮಂಡಳಿಯು ಅಂತಿಮ ಅನುಮೋದನೆ ನೀಡುತ್ತದೆ’ ಎಂದು ಅಧಿಕಾರಿಗಳು ತಿಳಿಸಿದರು.