<p><strong>ನವದೆಹಲಿ:</strong> ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಫೆಬ್ರುವರಿಯಲ್ಲಿ ನಡೆದ ದಾಳಿಗೆ ಗುಪ್ತಚರ ವೈಫಲ್ಯ ಕಾರಣವಲ್ಲ ಎಂದು ಸರ್ಕಾರವು ರಾಜ್ಯಸಭೆಗೆ ಬುಧವಾರ ತಿಳಿಸಿದೆ. ಪುಲ್ವಾಮಾ ದಾಳಿಯಲ್ಲಿ ಸಿಆರ್ಪಿಎಫ್ನ 40 ಯೋಧರು ಬಲಿಯಾಗಿದ್ದರು.</p>.<p>ಪುಲ್ವಾಮಾ ದಾಳಿಗೆ ಗುಪ್ತಚರ ವೈಫಲ್ಯ ಕಾರಣವೇ ಎಂದು ಕರ್ನಾಟಕದ ಕಾಂಗ್ರೆಸ್ ಸಂಸದ ಸಯ್ಯದ್ ನಾಸಿರ್ ಹುಸೇನ್ ಅವರು ಕೇಳಿದ್ದ ಪ್ರಶ್ನೆಗೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ.ಕೃಷ್ಣ ರೆಡ್ಡಿ ಈ ಉತ್ತರ ನೀಡಿದ್ದಾರೆ.</p>.<p>ಗುಪ್ತಚರ ವೈಫಲ್ಯವಲ್ಲದಿದ್ದರೆ 300 ಕಿಲೋ ಸ್ಫೋಟಕಗಳಿದ್ದ ಆತ್ಮಹತ್ಯಾ ಬಾಂಬರ್ನ ಕಾರು ಹೆದ್ದಾರಿಯನ್ನು ಪ್ರವೇಶಿಸಿದ್ದು ಹೇಗೆ ಎಂಬ ಪ್ರಶ್ನೆಗೆ, ‘ಜಮ್ಮು ಮತ್ತು ಕಾಶ್ಮೀರವು ಕಳೆದ 30 ವರ್ಷಗಳಿಂದ ಗಡಿಯಾಚೆಗಿನ ಭಯೋತ್ಪಾದನೆಗೆ ತುತ್ತಾಗಿದೆ ಎಂಬ ಉತ್ತರ ನೀಡಲಾಗಿದೆ.</p>.<p>‘ಭಯೋತ್ಪಾದನೆ ದಮನದ ನೀತಿಯನ್ನು ಅನುಸರಿಸಲಾಗುತ್ತಿದೆ ಮತ್ತು ಕಳೆದ ಕೆಲವು ವರ್ಷಗಳಿಂದ ದಮನ ಕಾರ್ಯಾಚರಣೆ ದಿಟ್ಟವಾಗಿ ನಡೆಯುತ್ತಿದೆ. ಹಾಗಾಗಿ, ಹಲವು ಉಗ್ರರ ಹತ್ಯೆ ಮಾಡಲಾಗಿದೆ. ಎಲ್ಲ ಸಂಸ್ಥೆಗಳೂ ಸಮನ್ವಯದಿಂದ ಕೆಲಸ ಮಾಡುತ್ತಿವೆ. ಗುಪ್ತಚರ ಮಾಹಿತಿಯನ್ನು ಸಂಸ್ಥೆಗಳು ಹಂಚಿಕೊಳ್ಳುತ್ತಿವೆ’ ಎಂದು ತಿಳಿಸಲಾಗಿದೆ.</p>.<p>ಗುಪ್ತಚರ ವೈಫಲ್ಯದಿಂದಾಗಿಯೇ ದಾಳಿ ನಡೆದಿದೆ ಎಂದು ವಿರೋಧ ಪಕ್ಷಗಳು ಸರ್ಕಾರದ ಮೇಲೆ ಆರೋಪ ಹೊರಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಫೆಬ್ರುವರಿಯಲ್ಲಿ ನಡೆದ ದಾಳಿಗೆ ಗುಪ್ತಚರ ವೈಫಲ್ಯ ಕಾರಣವಲ್ಲ ಎಂದು ಸರ್ಕಾರವು ರಾಜ್ಯಸಭೆಗೆ ಬುಧವಾರ ತಿಳಿಸಿದೆ. ಪುಲ್ವಾಮಾ ದಾಳಿಯಲ್ಲಿ ಸಿಆರ್ಪಿಎಫ್ನ 40 ಯೋಧರು ಬಲಿಯಾಗಿದ್ದರು.</p>.<p>ಪುಲ್ವಾಮಾ ದಾಳಿಗೆ ಗುಪ್ತಚರ ವೈಫಲ್ಯ ಕಾರಣವೇ ಎಂದು ಕರ್ನಾಟಕದ ಕಾಂಗ್ರೆಸ್ ಸಂಸದ ಸಯ್ಯದ್ ನಾಸಿರ್ ಹುಸೇನ್ ಅವರು ಕೇಳಿದ್ದ ಪ್ರಶ್ನೆಗೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ.ಕೃಷ್ಣ ರೆಡ್ಡಿ ಈ ಉತ್ತರ ನೀಡಿದ್ದಾರೆ.</p>.<p>ಗುಪ್ತಚರ ವೈಫಲ್ಯವಲ್ಲದಿದ್ದರೆ 300 ಕಿಲೋ ಸ್ಫೋಟಕಗಳಿದ್ದ ಆತ್ಮಹತ್ಯಾ ಬಾಂಬರ್ನ ಕಾರು ಹೆದ್ದಾರಿಯನ್ನು ಪ್ರವೇಶಿಸಿದ್ದು ಹೇಗೆ ಎಂಬ ಪ್ರಶ್ನೆಗೆ, ‘ಜಮ್ಮು ಮತ್ತು ಕಾಶ್ಮೀರವು ಕಳೆದ 30 ವರ್ಷಗಳಿಂದ ಗಡಿಯಾಚೆಗಿನ ಭಯೋತ್ಪಾದನೆಗೆ ತುತ್ತಾಗಿದೆ ಎಂಬ ಉತ್ತರ ನೀಡಲಾಗಿದೆ.</p>.<p>‘ಭಯೋತ್ಪಾದನೆ ದಮನದ ನೀತಿಯನ್ನು ಅನುಸರಿಸಲಾಗುತ್ತಿದೆ ಮತ್ತು ಕಳೆದ ಕೆಲವು ವರ್ಷಗಳಿಂದ ದಮನ ಕಾರ್ಯಾಚರಣೆ ದಿಟ್ಟವಾಗಿ ನಡೆಯುತ್ತಿದೆ. ಹಾಗಾಗಿ, ಹಲವು ಉಗ್ರರ ಹತ್ಯೆ ಮಾಡಲಾಗಿದೆ. ಎಲ್ಲ ಸಂಸ್ಥೆಗಳೂ ಸಮನ್ವಯದಿಂದ ಕೆಲಸ ಮಾಡುತ್ತಿವೆ. ಗುಪ್ತಚರ ಮಾಹಿತಿಯನ್ನು ಸಂಸ್ಥೆಗಳು ಹಂಚಿಕೊಳ್ಳುತ್ತಿವೆ’ ಎಂದು ತಿಳಿಸಲಾಗಿದೆ.</p>.<p>ಗುಪ್ತಚರ ವೈಫಲ್ಯದಿಂದಾಗಿಯೇ ದಾಳಿ ನಡೆದಿದೆ ಎಂದು ವಿರೋಧ ಪಕ್ಷಗಳು ಸರ್ಕಾರದ ಮೇಲೆ ಆರೋಪ ಹೊರಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>