ಶುಕ್ರವಾರ ಈ ಆದೇಶವನ್ನು ಬೈಜಲ್ ಹೊರಡಿಸಿದ್ದರು. ಈ ನಡೆಗೆ ಎಎಪಿ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಬೈಜಲ್ ಅವರ ಜೊತೆ ಎರಡು ಸುತ್ತಿನ ಸಭೆಯನ್ನು ಸರ್ಕಾರ ನಡೆಸಿತ್ತು. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಆದೇಶದಿಂದ ಈಗಿರುವ ವ್ಯವಸ್ಥೆಯ ಮೇಲೆ ಮತ್ತಷ್ಟು ಹೊರೆಯಾಗಲಿದೆ ಎಂದು ಸರ್ಕಾರ ಅಭಿಪ್ರಾಯ ವ್ಯಕ್ತಪಡಿಸಿತು.