ಮುಂಬೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಯನ್ನು ಕೇವಲ ಅಲ್ಪಸಂಖ್ಯಾತರು ವಿರೋಧಿಸುತ್ತಿಲ್ಲ. ದೇಶದ ಒಗ್ಗಟ್ಟು ಮತ್ತು ಪ್ರಗತಿಯ ಬಗ್ಗೆ ಕಾಳಜಿ ಹೊಂದಿರುವ ಜನರು ಈ ಕಾಯ್ದೆಗಳನ್ನು ವಿರೋಧಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಡುತ್ತಿರುವ ಕಾಯ್ದೆಗಳು ದೇಶದ ಕಾನೂನು ವ್ಯವಸ್ಥೆಯನ್ನು ಹಾಳು ಮಾಡಲಿವೆ. ಇದರಿಂದ ಧಾರ್ಮಿಕ ಹಾಗೂ ಸಾಮಾಜಿಕ ಸಾಮರಸ್ಯ ಹದಗೆಡಲಿದೆ,’ ಎಂದು ಪವಾರ್ ತಿಳಿಸಿದ್ದಾರೆ.