ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ ಪ್ರಕರಣ| ಅಪರಾಧಿಯ ಕಾನೂನು ಹೋರಾಟದ ದಾರಿ ಅಂತ್ಯವಾಗಿವೆ ಎಂದ ಕೋರ್ಟ್‌

Last Updated 16 ಮಾರ್ಚ್ 2020, 11:27 IST
ಅಕ್ಷರ ಗಾತ್ರ

ನವದೆಹಲಿ: ‘ನನ್ನ ಪರವಾಗಿ ವಾದ ಮಂಡಿಸಿದ ಈ ಹಿಂದಿನ ವಕೀಲರು ದಾರಿತಪ್ಪಿಸಿದ್ದಾರೆ. ಹೀಗಾಗಿ ನನಗೆ ನ್ಯಾಯಾಂಗ ಹೋರಾಟಕ್ಕಿರುವ ಎಲ್ಲ ಅವಕಾಶಗಳನ್ನು ಮರಳಿ ಕಲ್ಪಿಸಬೇಕು,’ ಎಂದು ಮನವಿ ಮಾಡಿ ನಿರ್ಭಯಾ ಅತ್ಯಾಚಾರ ಅಪರಾಧಿ ಮುಕೇಶ್‌ ಸಿಂಗ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಳ್ಳಿ ಹಾಕಿದೆ.

‘ಅರ್ಜಿದಾರ ಈ ಹಿಂದೆ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ಮತ್ತು ಕಾನೂನು ಪರಿಹಾರಾತ್ಮಕ ಅರ್ಜಿಗಳು ವಜಾಗೊಂಡಿವೆ. ಇನ್ನು ಯಾವ ಕಾನೂನಾತ್ಮಕ ಮಾರ್ಗಗಳು ಉಳಿದಿವೆ’ ಎಂದು ಪ್ರಶ್ನೆ ಮಾಡಿದನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ ಮತ್ತು ಎಂ. ಆರ್‌ ಶಾ ಅವರಿದ್ದ ಪೀಠ ‘ಈ ಅರ್ಜಿಯ ವಿಚಾರಣೆಯಲ್ಲಿ ಹುರುಳಿಲ್ಲ,’ ತಿಳಿಸಿತು.

ಪ್ರಕರಣದಲ್ಲಿ ನ್ಯಾಯಾಲಯಗಳು ಈ ಹಿಂದೆ ನೀಡಿರುವ ಎಲ್ಲ ಆದೇಶಗಳನ್ನು ರದ್ದು ಮಾಡುವಂತೆ ಕೋರಿದ್ದ ಮುಕೇಶ್‌ ಸಿಂಗ್‌, ರಾಷ್ಟ್ರಪತಿಗಳಿಂದ ತನ್ನ ದಯಾ ಅರ್ಜಿ ನಿರಾಕರಣೆಯಾಗಲು ಮತ್ತು ಕಾನೂನು ಪರಿಹಾರಾತ್ಮಕ ಅರ್ಜಿ ತಿರಸ್ಕಾರಗೊಳ್ಳಲು ವಕೀಲರಾದ ವೃಂದಾ ಗ್ರೋವರ್‌ ಅವರೇ ಕಾರಣ ಎಂದು ಆರೋಪಿಸಿದ್ದಾನೆ.

ಅಲ್ಲದೆ, ತನ್ನ ವಿಚಾರದಲ್ಲಿ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ವೃಂದಾ ಗ್ರೋವರ್‌ ಅವರಿಂದ ಕ್ರಿಮಿನಲ್‌ ಸಂಚು ನಡೆದಿದೆ. ಅವರಿಂದ ಅನ್ಯಾಯವಾಗಿದೆ. ಈ ವಿಚಾರದಲ್ಲಿ ಸಿಬಿಐ ತನಿಖೆಯಾಗಬೇಕು ಎಂದು ನ್ಯಾಯವಾದಿ ಎಂ. ಎಲ್‌ ಶರ್ಮಾ ಅವರ ಮೂಲಕ ಮುಕೇಶ್‌ ಸಿಂಗ್‌ ಅರ್ಜಿ ಸಲ್ಲಿಸಿದ್ದಾನೆ.

ಆದರೆ, ಮುಕೇಶ್‌ನ ಯಾವ ವಾದವನ್ನೂ ಆಲಿಸದ ಸುಪ್ರೀಂ ಕೋರ್ಟ್‌ ಅರ್ಜಿಯನ್ನು ತಳ್ಳಿಹಾಕಿದೆ.

ಇದೇ 20ರಂದು 5.30ಕ್ಕೆ ಅಪರಾಧಿಗಳನ್ನು ಗಲ್ಲಿಗೇರಿಸುವಂತೆ ಮಾರ್ಚ್‌ 5ರಂದು ನ್ಯಾಯಾಲಯ ಆದೇಶ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT