<p><strong>ಲಖನೌ: </strong>‘ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ನೀರಸ ಸಾಧನೆಗೆ ಸಮಾಜವಾದಿ ಪಕ್ಷದ ಜೊತೆಗಿನ ಮೈತ್ರಿಯೇ ಕಾರಣ’ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಆರೋಪಿಸಿದ್ದಾರೆ.</p>.<p>ರಾಜ್ಯದಲ್ಲಿ ಬಿಎಸ್ಪಿ–ಎಸ್ಪಿ ಮೈತ್ರಿ ಅಂತ್ಯಗೊಳ್ಳಲಿದೆ. ರಾಜ್ಯದ 12 ವಿಧಾನಸಭೆ ಕ್ಷೇತ್ರಗಳಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂಬ ಇಂಗಿತವನ್ನು ಈ ಮೂಲಕ ನೀಡಿದ್ದಾರೆ.</p>.<p>ಉಪ ಚುನಾವಣೆಗಳಲ್ಲಿ ಬಿಎಸ್ಪಿ ಸ್ಪರ್ಧಿಸುವುದಿಲ್ಲ ಎಂಬ ನಿಲುವನ್ನು ಮಾಯಾವತಿ ಈ ಮೂಲಕ ಕೈಬಿಟ್ಟಂತಾಗಿದೆ. ಕಳೆದ ಒಂದು ದಶಕದಲ್ಲಿ ಯಾವುದೇ ಉಪ ಚುನಾವಣೆಯಲ್ಲಿ ಬಿಎಸ್ಪಿ ಸ್ಪರ್ಧೆ ಮಾಡಿಲ್ಲ.</p>.<p>ಸೋಮವಾರ ದೆಹಲಿಯಲ್ಲಿ ಪಕ್ಷದ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಪರಾಮರ್ಶೆ ನಡೆಸಿದರು.</p>.<p>‘ಯಾದವರ ಮತಗಳ ವಿಭಜನೆ ತಡೆಯಲು ಅಖಿಲೇಶ್ ಯಾದವ್ ವಿಫಲರಾದರು. ಪತ್ನಿ ಡಿಂಪಲ್ ಅವರನ್ನೇ ಅಖಿಲೇಶ್ ಗೆಲ್ಲಿಸಿಕೊಳ್ಳಲಾಗಲಿಲ್ಲ’ ಎಂದು ಮಾಯಾವತಿ ಹೇಳಿದ್ದಾರೆ ಎನ್ನಲಾಗಿದೆ.</p>.<p>‘ಉತ್ತರ ಪ್ರದೇಶದಲ್ಲಿ ಪಕ್ಷದ ನೀರಸ ಸಾಧನೆಗೆ ಸಮಾಜವಾದಿ ಪಕ್ಷದ ಜೊತೆಗಿನ ಮೈತ್ರಿಯೇ ಕಾರಣ. ಎಸ್ಪಿ ತನ್ನ ಮತಗಳು ಬಿಎಸ್ಪಿಗೆ ಬೀಳುವಂತೆ ನೋಡಿಕೊಳ್ಳುವಲ್ಲಿ ವಿಫಲವಾಯಿತು’ ಎಂದು ಆರೋಪಿಸಿದರು.</p>.<p>ಡಿಂಪಲ್ ಯಾದವ್ ಕನೌಜ್ ಲೋಕಸಭೆ ಕ್ಷೇತ್ರದಲ್ಲಿ 12,000 ಮತಗಳಿಂದ ಸೋತಿದ್ದರು. ರಾಜ್ಯದಲ್ಲಿ ಲೋಕಸಭೆಯ 80 ಕ್ಷೇತ್ರಗಳಿದ್ದು, ಬಿಎಸ್ಪಿ 10, ಎಸ್ಪಿ 5 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.ಬಿಜೆಪಿ 62 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.</p>.<p>ಈ ಮಧ್ಯೆ, ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ಗುಜರಾತ್, ಬಿಹಾರ ಸೇರಿ ಆರು ರಾಜ್ಯಗಳಲ್ಲಿ ಚುನಾವಣಾ ಸಂಯೋಜಕರು, ಎರಡು ರಾಜ್ಯಗಳಲ್ಲಿ ಪಕ್ಷದ ಅಧ್ಯಕ್ಷರನ್ನು ಮಾಯಾವತಿ ಪದಚ್ಯುತಗೊಳಿಸಿದ್ದಾರೆ.</p>.<p><strong>ಅಖಿಲೇಶ್ ಯಾದವ್ ಮೌನಕ್ಕೆ ಶರಣು</strong></p>.<p>ಬಿಎಸ್ಪಿ ಜೊತೆಗಿನ ಮೈತ್ರಿ ಮುಂದುವರಿಯಲಿದೆ ಎಂಬ ಆಶಯವನ್ನು ಅಖಿಲೇಶ್ ಯಾದವ್ ಅವರು ಹೊಂದಿದ್ದಾರೆ. ಮೈತ್ರಿ ಮುರಿಯುವ ಬಗ್ಗೆ ಅವರು ಏನನ್ನೂ ಹೇಳಿಲ್ಲ. ಸೋಮವಾರ ಅಖಿಲೇಶ್ ಯಾದವ್ ಅವರು ಆಜಂಗಡ ಕ್ಷೇತ್ರದಲ್ಲಿ ಸಮಾವೇಶದಲ್ಲಿ ಮಾತನಾಡಿದರು. ಬಿಎಸ್ಪಿಯ ಅನೇಕ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>‘ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ನೀರಸ ಸಾಧನೆಗೆ ಸಮಾಜವಾದಿ ಪಕ್ಷದ ಜೊತೆಗಿನ ಮೈತ್ರಿಯೇ ಕಾರಣ’ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಆರೋಪಿಸಿದ್ದಾರೆ.</p>.<p>ರಾಜ್ಯದಲ್ಲಿ ಬಿಎಸ್ಪಿ–ಎಸ್ಪಿ ಮೈತ್ರಿ ಅಂತ್ಯಗೊಳ್ಳಲಿದೆ. ರಾಜ್ಯದ 12 ವಿಧಾನಸಭೆ ಕ್ಷೇತ್ರಗಳಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂಬ ಇಂಗಿತವನ್ನು ಈ ಮೂಲಕ ನೀಡಿದ್ದಾರೆ.</p>.<p>ಉಪ ಚುನಾವಣೆಗಳಲ್ಲಿ ಬಿಎಸ್ಪಿ ಸ್ಪರ್ಧಿಸುವುದಿಲ್ಲ ಎಂಬ ನಿಲುವನ್ನು ಮಾಯಾವತಿ ಈ ಮೂಲಕ ಕೈಬಿಟ್ಟಂತಾಗಿದೆ. ಕಳೆದ ಒಂದು ದಶಕದಲ್ಲಿ ಯಾವುದೇ ಉಪ ಚುನಾವಣೆಯಲ್ಲಿ ಬಿಎಸ್ಪಿ ಸ್ಪರ್ಧೆ ಮಾಡಿಲ್ಲ.</p>.<p>ಸೋಮವಾರ ದೆಹಲಿಯಲ್ಲಿ ಪಕ್ಷದ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಪರಾಮರ್ಶೆ ನಡೆಸಿದರು.</p>.<p>‘ಯಾದವರ ಮತಗಳ ವಿಭಜನೆ ತಡೆಯಲು ಅಖಿಲೇಶ್ ಯಾದವ್ ವಿಫಲರಾದರು. ಪತ್ನಿ ಡಿಂಪಲ್ ಅವರನ್ನೇ ಅಖಿಲೇಶ್ ಗೆಲ್ಲಿಸಿಕೊಳ್ಳಲಾಗಲಿಲ್ಲ’ ಎಂದು ಮಾಯಾವತಿ ಹೇಳಿದ್ದಾರೆ ಎನ್ನಲಾಗಿದೆ.</p>.<p>‘ಉತ್ತರ ಪ್ರದೇಶದಲ್ಲಿ ಪಕ್ಷದ ನೀರಸ ಸಾಧನೆಗೆ ಸಮಾಜವಾದಿ ಪಕ್ಷದ ಜೊತೆಗಿನ ಮೈತ್ರಿಯೇ ಕಾರಣ. ಎಸ್ಪಿ ತನ್ನ ಮತಗಳು ಬಿಎಸ್ಪಿಗೆ ಬೀಳುವಂತೆ ನೋಡಿಕೊಳ್ಳುವಲ್ಲಿ ವಿಫಲವಾಯಿತು’ ಎಂದು ಆರೋಪಿಸಿದರು.</p>.<p>ಡಿಂಪಲ್ ಯಾದವ್ ಕನೌಜ್ ಲೋಕಸಭೆ ಕ್ಷೇತ್ರದಲ್ಲಿ 12,000 ಮತಗಳಿಂದ ಸೋತಿದ್ದರು. ರಾಜ್ಯದಲ್ಲಿ ಲೋಕಸಭೆಯ 80 ಕ್ಷೇತ್ರಗಳಿದ್ದು, ಬಿಎಸ್ಪಿ 10, ಎಸ್ಪಿ 5 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.ಬಿಜೆಪಿ 62 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.</p>.<p>ಈ ಮಧ್ಯೆ, ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ಗುಜರಾತ್, ಬಿಹಾರ ಸೇರಿ ಆರು ರಾಜ್ಯಗಳಲ್ಲಿ ಚುನಾವಣಾ ಸಂಯೋಜಕರು, ಎರಡು ರಾಜ್ಯಗಳಲ್ಲಿ ಪಕ್ಷದ ಅಧ್ಯಕ್ಷರನ್ನು ಮಾಯಾವತಿ ಪದಚ್ಯುತಗೊಳಿಸಿದ್ದಾರೆ.</p>.<p><strong>ಅಖಿಲೇಶ್ ಯಾದವ್ ಮೌನಕ್ಕೆ ಶರಣು</strong></p>.<p>ಬಿಎಸ್ಪಿ ಜೊತೆಗಿನ ಮೈತ್ರಿ ಮುಂದುವರಿಯಲಿದೆ ಎಂಬ ಆಶಯವನ್ನು ಅಖಿಲೇಶ್ ಯಾದವ್ ಅವರು ಹೊಂದಿದ್ದಾರೆ. ಮೈತ್ರಿ ಮುರಿಯುವ ಬಗ್ಗೆ ಅವರು ಏನನ್ನೂ ಹೇಳಿಲ್ಲ. ಸೋಮವಾರ ಅಖಿಲೇಶ್ ಯಾದವ್ ಅವರು ಆಜಂಗಡ ಕ್ಷೇತ್ರದಲ್ಲಿ ಸಮಾವೇಶದಲ್ಲಿ ಮಾತನಾಡಿದರು. ಬಿಎಸ್ಪಿಯ ಅನೇಕ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>