<p><strong>ನವದೆಹಲಿ: </strong>ಭಾರಿ ವಿವಾದ, ಪ್ರತಿಭಟನೆ ಮತ್ತು ಸಂಘರ್ಷಕ್ಕೆ ಕಾರಣವಾಗಿರುವ ಪೌರತ್ವ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪರಿಶೀಲನೆಗೆ ಒಳಪಡಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರ್ಧರಿಸಿದೆ. ಆದರೆ, ಅದರ ಜಾರಿಗೆ ತಡೆ ನೀಡಲು ನಿರಾಕರಿಸಿದೆ.</p>.<p>ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಪೌರತ್ವ ನೀಡುವುದು ಈ ಕಾಯ್ದೆಯ ಉದ್ದೇಶ. ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 59 ಅರ್ಜಿಗಳ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ತ್ರಿಸದಸ್ಯ ಪೀಠವು ಒಪ್ಪಿದೆ. ಕೇಂದ್ರಕ್ಕೆ ನೋಟಿಸ್ ನೀಡಿದೆ. ಮುಂದಿನ ವರ್ಷ ಜನವರಿ 22ರಂದು ವಿಚಾರಣೆ ಆರಂಭವಾಗಲಿದೆ.</p>.<p>ಮುಸ್ಲಿಂ ಲೀಗ್, ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮುಂತಾದವರು ಅರ್ಜಿದಾರರಲ್ಲಿ ಸೇರಿದ್ದಾರೆ. ಕಾಯ್ದೆಯ ಉದ್ದೇಶ ಮತ್ತು ಸಂಬಂಧಿಸಿ ಇತರ ವಿಚಾರಗಳ ಬಗ್ಗೆ ಜನವರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ವಕೀಲ ಅಶ್ವಿನಿ ಉಪಾಧ್ಯಾಯ ಅವರು ಕೋರಿದ್ದರು. ಈ ವಿಚಾರದಲ್ಲಿ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಹೇಳಿದರು.</p>.<p>ಕಾಯ್ದೆಗೆ ತಡೆ ನೀಡಬೇಕು ಎಂದು ಕೆಲವು ಅರ್ಜಿದಾರರ ವಕೀಲರು ಕೋರಿದರು. ಆದರೆ, ವೇಣುಗೋಪಾಲ್ ಅವರು ಇದನ್ನು ವಿರೋಧಿಸಿದರು. ಅಧಿಸೂಚನೆ ಪ್ರಕಟವಾದ ಬಳಿಕ ಕಾಯ್ದೆಗೆ ತಡೆ ನೀಡಲು ಅವಕಾಶ ಇಲ್ಲ ಎಂದು ನಾಲ್ಕು ತೀರ್ಪುಗಳು ಬಂದಿವೆ ಎಂದು ಅವರು ತಿಳಿಸಿದರು.</p>.<p>ಕಾಯ್ದೆಯ ಅಡಿಯಲ್ಲಿ ನಿಯಮ ರೂಪಿಸುವಿಕೆಯಂತಹ ಹಲವು ಕೆಲಸಗಳು ಇನ್ನೂ ಆಗಿಲ್ಲ.ಕಾಯ್ದೆಗೆ ಈಗಲೇ ತಡೆ ಕೋರುವ ಅಗತ್ಯ ಇಲ್ಲ ಎಂದು ಕೆಲವು ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ರಾಜೀವ್ ಧವನ್ ಹೇಳಿದರು.</p>.<p>ಹಾಗಾಗಿ, ತಡೆ ಕೋರುವುದಕ್ಕೆ ಸಂಬಂಧಿಸಿದ ವಾದ–ಪ್ರತಿವಾದಗಳನ್ನು ಜನವರಿ 22ರಂದು ಮಂಡಿಸಬಹುದು ಎಂದು ಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರಿ ವಿವಾದ, ಪ್ರತಿಭಟನೆ ಮತ್ತು ಸಂಘರ್ಷಕ್ಕೆ ಕಾರಣವಾಗಿರುವ ಪೌರತ್ವ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪರಿಶೀಲನೆಗೆ ಒಳಪಡಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರ್ಧರಿಸಿದೆ. ಆದರೆ, ಅದರ ಜಾರಿಗೆ ತಡೆ ನೀಡಲು ನಿರಾಕರಿಸಿದೆ.</p>.<p>ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದ ಮುಸ್ಲಿಮೇತರ ಅಕ್ರಮ ವಲಸಿಗರಿಗೆ ಪೌರತ್ವ ನೀಡುವುದು ಈ ಕಾಯ್ದೆಯ ಉದ್ದೇಶ. ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 59 ಅರ್ಜಿಗಳ ವಿಚಾರಣೆ ನಡೆಸಲು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ತ್ರಿಸದಸ್ಯ ಪೀಠವು ಒಪ್ಪಿದೆ. ಕೇಂದ್ರಕ್ಕೆ ನೋಟಿಸ್ ನೀಡಿದೆ. ಮುಂದಿನ ವರ್ಷ ಜನವರಿ 22ರಂದು ವಿಚಾರಣೆ ಆರಂಭವಾಗಲಿದೆ.</p>.<p>ಮುಸ್ಲಿಂ ಲೀಗ್, ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮುಂತಾದವರು ಅರ್ಜಿದಾರರಲ್ಲಿ ಸೇರಿದ್ದಾರೆ. ಕಾಯ್ದೆಯ ಉದ್ದೇಶ ಮತ್ತು ಸಂಬಂಧಿಸಿ ಇತರ ವಿಚಾರಗಳ ಬಗ್ಗೆ ಜನವರಿಗೆ ತಿಳಿವಳಿಕೆ ಮೂಡಿಸಬೇಕು ಎಂದು ವಕೀಲ ಅಶ್ವಿನಿ ಉಪಾಧ್ಯಾಯ ಅವರು ಕೋರಿದ್ದರು. ಈ ವಿಚಾರದಲ್ಲಿ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಹೇಳಿದರು.</p>.<p>ಕಾಯ್ದೆಗೆ ತಡೆ ನೀಡಬೇಕು ಎಂದು ಕೆಲವು ಅರ್ಜಿದಾರರ ವಕೀಲರು ಕೋರಿದರು. ಆದರೆ, ವೇಣುಗೋಪಾಲ್ ಅವರು ಇದನ್ನು ವಿರೋಧಿಸಿದರು. ಅಧಿಸೂಚನೆ ಪ್ರಕಟವಾದ ಬಳಿಕ ಕಾಯ್ದೆಗೆ ತಡೆ ನೀಡಲು ಅವಕಾಶ ಇಲ್ಲ ಎಂದು ನಾಲ್ಕು ತೀರ್ಪುಗಳು ಬಂದಿವೆ ಎಂದು ಅವರು ತಿಳಿಸಿದರು.</p>.<p>ಕಾಯ್ದೆಯ ಅಡಿಯಲ್ಲಿ ನಿಯಮ ರೂಪಿಸುವಿಕೆಯಂತಹ ಹಲವು ಕೆಲಸಗಳು ಇನ್ನೂ ಆಗಿಲ್ಲ.ಕಾಯ್ದೆಗೆ ಈಗಲೇ ತಡೆ ಕೋರುವ ಅಗತ್ಯ ಇಲ್ಲ ಎಂದು ಕೆಲವು ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ರಾಜೀವ್ ಧವನ್ ಹೇಳಿದರು.</p>.<p>ಹಾಗಾಗಿ, ತಡೆ ಕೋರುವುದಕ್ಕೆ ಸಂಬಂಧಿಸಿದ ವಾದ–ಪ್ರತಿವಾದಗಳನ್ನು ಜನವರಿ 22ರಂದು ಮಂಡಿಸಬಹುದು ಎಂದು ಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>