<p><strong>ನವದೆಹಲಿ:</strong>21 ದಿನಗಳ ಲಾಕ್ಡೌನ್ ಅವಧಿಯಲ್ಲಿ ಅವಶ್ಯಕ ಮತ್ತು ಅವಶ್ಯಕವಲ್ಲದ್ದು ಎಂದು ವಿಂಗಡಿಸದೆ ಎಲ್ಲ ರೀತಿಯ ಸರಕು ಸಾಗಾಣಿಕೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಅನುಮತಿ ನೀಡಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>ಸುದ್ದಿ ಪತ್ರಿಕೆಗಳು, ಹಾಲು ಸಂಗ್ರಹ ಮತ್ತು ವಿತರಣೆ, ಆಹಾರ ವಸ್ತುಗಳು ಮತ್ತು ನೈರ್ಮಲ್ಯ ವಸ್ತುಗಳ ಸಾಗಾಟಕ್ಕೆಅನುಮತಿ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಬಲ್ಲಾ ಅವರು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ.</p>.<p>ಪ್ಯಾಕ್ ಮಾಡಲಿರುವ ವಸ್ತುಗಳು ಸೇರಿದಂತೆ ಹಾಲು ಸಂಗ್ರಹ ಮತ್ತು ವಿತರಣೆಯ ಎಲ್ಲ ಪ್ರಕ್ರಿಯೆಗಳಿಗೆ ಅನುಮತಿ ನೀಡಲಾಗಿದೆ ಎಂದು ಬಲ್ಲಾ ತಮ್ಮ ಪತ್ರದಲ್ಲಿ ಹೇಳಿದ್ದಾರೆ. ಮುದ್ರಣ ಮಾಧ್ಯಮದಲ್ಲಿ ಸುದ್ದಿ ಪತ್ರಿಕೆಯ ವಿತರಣೆಗೂ ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ನೈರ್ಮಲ್ಯ ಉತ್ಪನ್ನಗಳಾದ ಹ್ಯಾಂಡ್ ವಾಶ್, ಸೋಪ್, ಸೋಂಕು ನಿವಾರಕ, ಬಾಡಿ ವಾಶ್, ಶ್ಯಾಂಪೂ, ನೆಲ ಒರೆಸುವ ಸಾಧನಗಳು, ಮಾರ್ಜಕ, ಟಿಶ್ಯೂ ಪೇಪರ್, ಟೂತ್ ಪೇಸ್ಟ್, ಸ್ಯಾನಿಟರಿ ಪ್ಯಾಡ್, ಡೈಪರ್, ಬ್ಯಾಟರಿ ಸೆಲ್. ಚಾರ್ಜರ್ ಮೊದಲಾದವುಗಳ ಸಾಗಾಣಿಕೆಗೆ ಅನುಮತಿ ನೀಡಲಾಗಿದೆ.</p>.<p>ಅದೇ ವೇಳೆ ನಿರ್ಗತಿಕರಾಗಿರುವ ಜನರಿಗೆ, ವಲಸೆ ಕಾರ್ಮಿಕರಿಗೆ, ಲಾಕ್ಡೌನ್ನಿಂದಾಗಿ ಸಿಕ್ಕಿಹಾಕಿಕೊಂಡಿರುವವರಿಗೆ ಆಹಾರ, ನಿರಾಶ್ರಿತರ ಶಿಬಿರ ಒದಗಿಸುವುದಕ್ಕಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>21 ದಿನಗಳ ಲಾಕ್ಡೌನ್ ಅವಧಿಯಲ್ಲಿ ಅವಶ್ಯಕ ಮತ್ತು ಅವಶ್ಯಕವಲ್ಲದ್ದು ಎಂದು ವಿಂಗಡಿಸದೆ ಎಲ್ಲ ರೀತಿಯ ಸರಕು ಸಾಗಾಣಿಕೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಅನುಮತಿ ನೀಡಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>ಸುದ್ದಿ ಪತ್ರಿಕೆಗಳು, ಹಾಲು ಸಂಗ್ರಹ ಮತ್ತು ವಿತರಣೆ, ಆಹಾರ ವಸ್ತುಗಳು ಮತ್ತು ನೈರ್ಮಲ್ಯ ವಸ್ತುಗಳ ಸಾಗಾಟಕ್ಕೆಅನುಮತಿ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಬಲ್ಲಾ ಅವರು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ.</p>.<p>ಪ್ಯಾಕ್ ಮಾಡಲಿರುವ ವಸ್ತುಗಳು ಸೇರಿದಂತೆ ಹಾಲು ಸಂಗ್ರಹ ಮತ್ತು ವಿತರಣೆಯ ಎಲ್ಲ ಪ್ರಕ್ರಿಯೆಗಳಿಗೆ ಅನುಮತಿ ನೀಡಲಾಗಿದೆ ಎಂದು ಬಲ್ಲಾ ತಮ್ಮ ಪತ್ರದಲ್ಲಿ ಹೇಳಿದ್ದಾರೆ. ಮುದ್ರಣ ಮಾಧ್ಯಮದಲ್ಲಿ ಸುದ್ದಿ ಪತ್ರಿಕೆಯ ವಿತರಣೆಗೂ ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ನೈರ್ಮಲ್ಯ ಉತ್ಪನ್ನಗಳಾದ ಹ್ಯಾಂಡ್ ವಾಶ್, ಸೋಪ್, ಸೋಂಕು ನಿವಾರಕ, ಬಾಡಿ ವಾಶ್, ಶ್ಯಾಂಪೂ, ನೆಲ ಒರೆಸುವ ಸಾಧನಗಳು, ಮಾರ್ಜಕ, ಟಿಶ್ಯೂ ಪೇಪರ್, ಟೂತ್ ಪೇಸ್ಟ್, ಸ್ಯಾನಿಟರಿ ಪ್ಯಾಡ್, ಡೈಪರ್, ಬ್ಯಾಟರಿ ಸೆಲ್. ಚಾರ್ಜರ್ ಮೊದಲಾದವುಗಳ ಸಾಗಾಣಿಕೆಗೆ ಅನುಮತಿ ನೀಡಲಾಗಿದೆ.</p>.<p>ಅದೇ ವೇಳೆ ನಿರ್ಗತಿಕರಾಗಿರುವ ಜನರಿಗೆ, ವಲಸೆ ಕಾರ್ಮಿಕರಿಗೆ, ಲಾಕ್ಡೌನ್ನಿಂದಾಗಿ ಸಿಕ್ಕಿಹಾಕಿಕೊಂಡಿರುವವರಿಗೆ ಆಹಾರ, ನಿರಾಶ್ರಿತರ ಶಿಬಿರ ಒದಗಿಸುವುದಕ್ಕಾಗಿ ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>