ಶಿವಸೇನಾದ ಸಂಸ್ಥಾಪಕ ದಿವಂಗತ ಬಾಳಾ ಸಾಹೇಬ್ ಠಾಕ್ರೆ ಅವರ ಜನ್ಮ ದಿನಾಚರಣೆ ವೇಳೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಹಳೆಯ ಮಿತ್ರ ಪಕ್ಷದಿಂದ ಬೆನ್ನಿಗೆ ಚೂರಿ ಹಾಕಿಸಿಕೊಂಡಿದ್ದರಿಂದಾಗಿಯೇ ನಾವು ಬೇರೊಂದು ದಾರಿಯನ್ನು ಕಂಡುಕೊಳ್ಳಬೇಕಾಯಿತು. ಅವರು ನಮ್ಮ ನಂಬಿಕೆಯನ್ನು ಹಾಳುಗೆಡವಿದರು ಮತ್ತು ಅವರು ನೀಡಿದ್ದ ಭರವಸೆಯನ್ನು ಈಡೇರಿಸಲಿಲ್ಲ. ನನ್ನನ್ನು ಸುಳ್ಳುಗಾರನೆಂದು ಬಿಂಬಿಸಲು ಪ್ರಯತ್ನಿಸಿದರು. ಹೀಗಾಗಿಯೇ ನಾನು ಬೇರೆಯವರೊಂದಿಗೆ ಸೇರಿ ಸರ್ಕಾರ ರಚಿಸಬೇಕಾಯಿತು.ಇದರರ್ಥ ನಾನು ಹಿಂದುತ್ವವನ್ನು ತೊರೆದಿದ್ದೇನೆ ಅಥವಾ ನನ್ನ ಬಣ್ಣವನ್ನು ಬದಲಿಸಿದ್ದೇನೆ ಎಂದಲ್ಲ ಎಂದು ಹೇಳಿದ್ದಾರೆ.